ಬ್ರೇಕಿಂಗ್ ನ್ಯೂಸ್
28-10-22 07:50 pm Mangalore Correspondent ಕರಾವಳಿ
ಮಂಗಳೂರು, ಅ.28 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ವಿಭಿನ್ನವಾಗಿ ನಡೆಯಿತು. ನಗರದ ಬೋಳೂರಿನ ಸುಲ್ತಾನ್ ಬತ್ತೇರಿಯಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿ ಸೇರುವಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿಬಂತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಮೂಡಿಬಂತು. ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲು ವರೆಗೆ 8 ಕಿ.ಮೀ. ಸಾಗುವ ಮೂಲಕ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳು ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ನದಿ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳಲ್ಲಿ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿಬಂತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.






ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.






11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಆಸಕ್ತರು ಸೇರಿದಂತೆ 500ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ ನೆರವೇರಿತು.
Koti Kanta Gayana onboard 50 boats at Sultan Bathery in Mangalore by MLA Vedavyas Kamath.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm