ಬ್ರೇಕಿಂಗ್ ನ್ಯೂಸ್
28-10-22 07:50 pm Mangalore Correspondent ಕರಾವಳಿ
ಮಂಗಳೂರು, ಅ.28 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ವಿಭಿನ್ನವಾಗಿ ನಡೆಯಿತು. ನಗರದ ಬೋಳೂರಿನ ಸುಲ್ತಾನ್ ಬತ್ತೇರಿಯಲ್ಲಿ ನೇತ್ರಾವತಿ ಮತ್ತು ಫಲ್ಗುಣಿ ನದಿ ಸೇರುವಲ್ಲಿ 50ರಷ್ಟು ಬೋಟ್ ಗಳ ಒಂದೂವರೆ ತಾಸಿನ ಯಾನದಲ್ಲಿ ಕೋಟಿ ಕಂಠ ಗಾಯನ ಸೊಗಸಾಗಿ ಮೂಡಿಬಂತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಂದಾಳತ್ವದಲ್ಲಿ ಮೀನುಗಾರಿಕಾ ಇಲಾಖೆ, ಮೊಗವೀರ ಸಮಾಜದ ಸಹಯೋಗದಲ್ಲಿ ಕೋಟಿ ಕಂಠ ಗಾಯನ ಮೂಡಿಬಂತು. ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಹೊರಟ ಬೋಟ್ ಗಳು ತೋಟ ಬೆಂಗ್ರೆ ಅಳಿವೆ ಬಾಗಿಲು ವರೆಗೆ 8 ಕಿ.ಮೀ. ಸಾಗುವ ಮೂಲಕ ಕನ್ನಡದ ಆರು ಹಾಡುಗಳನ್ನು ಹಾಡಲಾಯಿತು. 5 ಪರ್ಸಿನ್ ಬೋಟ್ ಗಳು, 10 ಆಳ ಸಮುದ್ರ ಮೀನುಗಾರಿಕಾ ಬೋಟ್ ಗಳು, 25 ನಾಡದೋಣಿಗಳು, 10 ಕರೆ ಫಿಶ್ಶಿಂಗ್ ಬೋಟ್ ಗಳು ಹಾಗೂ 4 ಫೆರಿ ಬೋಟ್ ಗಳಲ್ಲಿ ಕೋಟಿ ಕಂಠಗಾಯನ ಮೂಡಿತು. ಎಲ್ಲಾ ಬೋಟ್ ಗಳು ಸಂಪೂರ್ಣ ಶೃಂಗಾರಗೊಂಡು ಕನ್ನಡದ ಬಾವುಟಗಳಿಂದ ರಾರಾಜಿಸಿತ್ತು. ನದಿ ನಡುವಿನ ಸೊಗಸನ್ನು ವೀಕ್ಷಿಸುತ್ತ ಬೋಟ್ ಗಳಲ್ಲಿ ಭರ್ತಿ ಜನರೊಂದಿಗೆ ಕೋಟಿ ಕಂಠಗಾಯನ ಮೂಡಿಬಂತು. ತುಳು ಬಾವುಟವೂ ರಾರಾಜಿಸಿದ್ದು ವಿಶೇಷವೆನಿಸಿತು.






ಈ ಸಂದರ್ಭ ಮಾತನಾಡಿದ ಶಾಸಕ ಕಾಮತ್, ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ಮಾರ್ಗದರ್ಶನದಂತೆ ಕೋಟಿ ಕಂಠ ಗಾಯನವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಇದೊಂದು ಮಹತ್ವದ ದಿನವಾಗಿ ನಾಡಿನ ಜನತೆಯ ಮನದಾಳದಲ್ಲಿ ಸದಾ ಉಳಿಯಲಿದೆ ಎಂದರು.






11 ಗಂಟೆಗೆ ಬೋಟ್ ಗಳಲ್ಲಿ ಕೋಟಿ ಕಂಠ ಗಾಯನದ ಮೊದಲ ಹಾಡು ಆರಂಭವಾಗಿ ಆರು ಹಾಡುಗಳು ಸೊಗಸಾಗಿ ಮೂಡಿ ಬಂತು. ಕೊನೆಗೆ ತುಳು ಭಾಷೆಯ ಹಾಡನ್ನು ಹಾಡಲಾಯಿತು. ಮಂಗಳೂರು ಮನಪಾ ಉಪ ಮೇಯರ್ ಪೂರ್ಣಿಮಾ, ಮಂಗಳೂರು ಮನಪಾ ಸದಸ್ಯರು, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಆಸಕ್ತರು ಸೇರಿದಂತೆ 500ಕ್ಕೂ ಅಧಿಕ ಮಂದಿ ಈ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು. ಕೋಟಿ ಕಂಠ ಗಾಯನಕ್ಕೂ ಮುನ್ನ ಸುಲ್ತಾನ್ ಬತ್ತೇರಿಯ ಕಡಲ ಕಿನಾರೆಯಲ್ಲಿ ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಸದಸ್ಯರಿಂದ ಸಮೂಹಗಾನ, ದೇಶಭಕ್ತಿಗೀತೆ, ನಾಡಗೀತೆಗಳ ಗಾಯನ ನೆರವೇರಿತು.
Koti Kanta Gayana onboard 50 boats at Sultan Bathery in Mangalore by MLA Vedavyas Kamath.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm