ಬ್ರೇಕಿಂಗ್ ನ್ಯೂಸ್
29-10-22 12:49 pm Mangalore Correspondent ಕರಾವಳಿ
ಉಳ್ಳಾಲ, ಅ.29 : ಮುಡಿಪುವಿನ ಪೃಕೃತಿ ರಮಣೀಯ ಬೆಟ್ಟದಲ್ಲಿ ತಲೆ ಎತ್ತಿ ನಿಂತಿರುವ ಗೋವರ್ಧನಗಿರಿ ಶ್ರೀಕೃಷ್ಣ ಧ್ಯಾನ ಮಂದಿರಕ್ಕೆ ರಾಷ್ಟ್ರೀಯ ಪ್ರಾಶಸ್ತ್ಯ ಸಿಗುವಂತಾಗಲು ಪ್ರವಾಸೋದ್ಯಮ ಇಲಾಖೆ ಪ್ರಯತ್ನಿಸಬೇಕೆಂದು ರಾಜ್ಯಸಭಾ ಸದಸ್ಯರು, ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಉಳ್ಳಾಲ ತಾಲೂಕಿನ ಮುಡಿಪು ಗೋವರ್ಧನಗಿರಿಯಲ್ಲಿ ನಿರ್ಮಿಸಲಾದ ಶ್ರೀಕೃಷ್ಣ ಧ್ಯಾನ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಗೋವರ್ಧನೋತ್ಸವಕ್ಕೆ ಅವರು ಚಾಲನೆ ನೀಡಿದರು. ಕಾಲ, ಕಾಲಕ್ಕೆ ಬದಲಾವಣೆ ಅನಿವಾರ್ಯ. ಕೃಷ್ಣನನ್ನ ಕೋಣೆಯೊಳಗೆ ಇರಿಸದೆ ಇಂತಹ ಅತ್ಯಾಧುನಿಕ ಸುಂದರ ಮಂದಿರದಲ್ಲಿ ಕೂರಿಸಿದ್ದು ಶ್ಲಾಘನೀಯ. ಮನೆ ಕಟ್ಟುವಾಗ ಆಧುನಿಕತೆ ಹೆಸರಲ್ಲಿ ಶೌಚಾಲಯ ಒಂದಕ್ಕೆ ಲಕ್ಷಗಟ್ಟಲೆ ಖರ್ಚು ಮಾಡುತ್ತಾರೆ. ಆದರೆ ನಮ್ಮ ಮನದೊಳಗೆ ನೆಲೆಸಿರುವ ಪರಮಾತ್ಮನಿಗೆ ಎಷ್ಟೊಂದು ಒಳ್ಳೆಯ ಆಲಯ ಕಟ್ಟಬಹುದೆಂದು ಇಲ್ಲಿ ತೋರಿಸಿದ್ದಾರೆ. ವಿದೇಶದಲ್ಲಾದರೆ ಮುಡಿಪಿನ ಇಂತಹ ಧ್ಯಾನ ಕೇಂದ್ರ ನಿಜಕ್ಕೂ ಪ್ರಾಶಸ್ತ್ಯ ಪಡೆಯುವಂತದ್ದೇ ಆಗಿದೆ. ಆರೋಗ್ಯದ ದೃಷ್ಟಿಯಿಂದಾದರೂ ವಾರಕ್ಕೊಮ್ಮೆಯಾದರೂ ಸಾವರ್ಜನಿಕರು ನಡೆದೇ ಇಂತಹ ಕ್ಷೇತ್ರಗಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು.





ಒಡಿಯೂರು ಶ್ರೀಗಳಾದ ಗುರುದೇವಾನಂದ ಸ್ವಾಮೀಜಿ ಹಾಗೂ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನಗೈದರು.
ಕಾರ್ಯಕ್ರಮದಲ್ಲಿ ಕಂಬಳ ಕ್ಷೇತ್ರದ ಸಾಧಕ ವೆಂಕಪ್ಪ ಕಾಜವ ಮಿತ್ತಕೋಡಿ, ಸಮಾಜ ಸೇವಕ ಸೇಸಪ್ಪ ಟೈಲರ್ ಪಜೀರು, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಮಮತಾ ಆರ್. ರೈ ಮತ್ತು ಡಾ. ರವಿರಾಜೇಶ್ ರೈ ಹಾಗೂ ಶಾಸ್ತ್ರೀಯ ಸಂಗೀತಗಾರ್ತಿ ಮಂಜುಳಾ ಜಿ. ರಾವ್ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮುನ್ನ ಮುಡಿಪು ಪೇಟೆಯ ಶ್ರೀ ಮುಡಿಪಿನ್ನಾರ್ ದೇವಸ್ಥಾನದಿಂದ ಗೋವರ್ಧನಗಿರಿಯಲ್ಲಿರುವ ಶ್ರೀಕೃಷ್ಣ ಧ್ಯಾನಕೇಂದ್ರಕ್ಕೆ ವಿವಿಧ ತಂಡಗಳ ಭಜನಾ ಸಂಕೀರ್ತನೆಯೊಂದಿಗೆ ಹಾಗೂ ಸಾಂಸ್ಕೃತಿಕ ಕಲಾತಂಡಗಳ ಕಲಾ ಪ್ರದರ್ಶನದೊಂದಿಗೆ ಡಾ.ವೀರೇಂದ್ರ ಹೆಗ್ಗಡೆ, ಸ್ವಾಮೀಜಿಗಳು ಹಾಗೂ ಅತಿಥಿಗಳನ್ನು ಭವ್ಯವಾದ ಶೋಭಾಯಾತ್ರೆಯೊಂದಿಗೆ ಕರೆ ತರಲಾಯಿತು.
Mangalore Dr Veerendra Heggade inaugurates Govardanostava in Mudupi.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm