ಬ್ರೇಕಿಂಗ್ ನ್ಯೂಸ್
29-10-22 02:17 pm HK News Desk ಕರಾವಳಿ
ಮಂಗಳೂರು, ಅ.29: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರಿಡುವುದಕ್ಕೆ ಕಾಂಗ್ರೆಸ್ ಸದಸ್ಯರು ಪ್ರಬಲ ಆಕ್ಷೇಪ ಸಲ್ಲಿಸಿದ್ದು ಪಾಲಿಕೆಯ ಸಭೆಯಲ್ಲಿ ಗದ್ದಲ ನಡೆಸಿದ್ದಾರೆ. ಶನಿವಾರ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸಾವರ್ಕರ್ ನಾಮಕರಣ ವಿಚಾರ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತು.
ಪಾಲಿಕೆಯ ಕಳೆದ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರಿಡುವ ಪ್ರಸ್ತಾಪವನ್ನು ಕೊನೆಯ ಕ್ಷಣದಲ್ಲಿ ಕಾರ್ಯಸೂಚಿಗೆ ಸೇರಿಸಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕರಿಂದ ಆಕ್ಷೇಪವೂ ವ್ಯಕ್ತವಾಗಿತ್ತು. ಆದರೆ ಪಾಲಿಕೆ ಸಭೆಯಲ್ಲಿ ಚರ್ಚೆಗೆ ಅವಕಾಶ ನೀಡಿರಲಿಲ್ಲ. ಈ ಬಗ್ಗೆ ಇಂದಿನ ಪಾಲಿಕೆ ಸಭೆಯಲ್ಲಿ ನಿರ್ಣಯ ಸ್ವೀಕರಿಸುವ ಮುನ್ನ ಕಾಂಗ್ರೆಸ್ ಪಕ್ಷದ ಆಕ್ಷೇಪವನ್ನು ದಾಖಲಿಸಬೇಕು ಎಂದು ಪಾಲಿಕೆಯ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ ಒತ್ತಾಯಿಸಿದ್ದಾರೆ. ಇದಕ್ಕೆ ಇತರೇ ಕಾಂಗ್ರೆಸ್ ಸದಸ್ಯರು ಕೂಡ ದನಿಗೂಡಿಸಿದ್ದಾರೆ.

ಕಾಂಗ್ರೆಸ್ ಮಾಜಿ ವಿಪಕ್ಷ ನಾಯಕ ಅಬ್ದುಲ್ ರವೂಫ್ ಮಾತನಾಡಿ, ಅಭಿವೃದ್ಧಿ ಕಾರ್ಯ, ತುರ್ತು ವಿಚಾರಗಳನ್ನು ಮಾತ್ರ ಕೊನೆ ಕ್ಷಣದಲ್ಲಿ ಕಾರ್ಯಸೂಚಿಗೆ ಸೇರಿಸಬಹುದು. ನಾಮಕರಣ ವಿಚಾರಗಳ ಬಗ್ಗೆ ಪಾಲಿಕೆಯಲ್ಲಿ ಚರ್ಚೆಗೂ ಅವಕಾಶ ನೀಡದೆ ಯಾಕೆ ಕೊನೆ ಕ್ಷಣದಲ್ಲಿ ಕಾರ್ಯ ಸೂಚಿಗೆ ಸೇರಿಸುತ್ತೀರಿ. ಇದರ ಅರ್ಥ ಏನು ಎಂದು ಆಡಳಿತಾರೂಢ ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.
ಆದರೆ ಬಿಜೆಪಿ ಸದಸ್ಯರು ಮಾತ್ರ ತಮ್ಮ ಕಾರ್ಯವನ್ನು ಸಮರ್ಥನೆ ಮಾಡಲು ತೊಡಗಿದರು. ಎರಡು ವರ್ಷಗಳ ಹಿಂದೆಯೇ ಪ್ರಸ್ತಾಪ ಆಗಿತ್ತು. ನಾಮಕರಣ ವಿಚಾರದಲ್ಲಿ ರಾಜ್ಯ ಸರಕಾರದಿಂದಲೂ ಒಪ್ಪಿಗೆ ಪಡೆದಿದ್ದೇವೆ ಎಂದರು. ಕಾಂಗ್ರೆಸ್ ಸದಸ್ಯರ ಆಕ್ಷೇಪ ದಾಖಲಿಸಲು ಮೇಯರ್ ಒಪ್ಪದ ಕಾರಣ, ವಿಪಕ್ಷ ಸದಸ್ಯರು ಸಭೆಯ ನಡುವೆ ಮೇಯರ್ ಪೀಠದ ಮುಂದೆ ಧರಣಿ ನಡೆಸಿ ಗದ್ದಲ ಎಬ್ಬಿಸಿದರು. ಬಳಿಕ ಮೇಯರ್ ಪಾಲಿಕೆ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಿ ಹೊರ ನಡೆದದರು. ಕೆಲವು ನಿಮಿಷಗಳ ಬಳಿಕ ಸಭೆಯನ್ನು ಮತ್ತೆ ಆರಂಭಿಸಲಾಯಿತು. ಪ್ರತಿಪಕ್ಷ ಸದಸ್ಯರು ತಮ್ಮ ಪಟ್ಟು ಸಡಿಲಿಸದ ಕಾರಣ ಕಾಂಗ್ರೆಸ್ ಆಕ್ಷೇಪವನ್ನು ದಾಖಲಿಸಲು ಮೇಯರ್ ಒಪ್ಪಿಗೆ ನೀಡಿದರು. ಕೊನೆಗೆ, ನಾಮಕರಣ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಆಕ್ಷೇಪ ಅಂಗೀಕರಿಸುವುದಾಗಿ ಮೇಯರ್ ಜಯಾನಂದ್ ಸಭೆಗೆ ತಿಳಿಸಿದರು.
Mangalore Naming Surathkal circle as
Savarkar, congress leaders oppose in MCC meeting
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm