ಬ್ರೇಕಿಂಗ್ ನ್ಯೂಸ್
02-11-22 07:59 pm Mangalore Correspondent ಕರಾವಳಿ
ಬೆಳ್ತಂಗಡಿ, ನ.2 : ಇಡೀ ದೇಶವೇ ತನ್ನ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಪತ್ನೀಕರಾಗಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ವೀರೇಂದ್ರ ಹೆಗ್ಗಡೆಯವರು ಇತ್ತೀಚೆಗೆ ಕುಟುಂಬ ಸಮೇತರಾಗಿ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ಬಳಿಯೂ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ದಂಪತಿಯನ್ನು ಗೌರವಿಸಿದರು. ನಟ ಪ್ರಮೋದ್ ಶೆಟ್ಟಿ ಜೊತೆಗಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ, ಸಿನಿಮಾ ತಯಾರಿಗೂ ಮೊದಲೇ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದರು. ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ. ತುಳು ಹಾಗೂ ಇತರ ಭಾಷೆಗಳಲ್ಲಿಯೂ ಸದ್ಯದಲ್ಲೇ ಕಾಂತಾರ ಪ್ರದರ್ಶನವಾಗಲಿದೆ ಎಂದವರು ಹೇಳಿದರು.
Kantara Actor and Director Rishab Shetty meets D. Veerendra Heggade takes blessings at Dharmasthala.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm