ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.



ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm