ಬ್ರೇಕಿಂಗ್ ನ್ಯೂಸ್
04-11-22 09:26 pm Mangalore Correspondent ಕರಾವಳಿ
ಮಂಗಳೂರು, ನ.4 : ನಗರ ಹೊರವಲಯದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದ ಹಂದಿ ಸಾಕಾಣಿಕೆ ಕೇಂದ್ರದಲ್ಲಿ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿರುತ್ತದೆ. ಹೀಗಾಗಿ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಕೆಲರಾಯಿ ಹಂದಿ ಸಾಕಣಿಕೆ ಕೇಂದ್ರದಿಂದ ಒಂದು ಕಿಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10 ಕಿಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.
ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಣೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕೆ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಕ್ಕೊಳಗಾಗುವ ಅವಶ್ಯಕತೆ ಇಲ್ಲ. ಹಂದಿ ಪಾಲಕರು ಸೂಕ್ತ ಮುಂಜಾಗೃತಾ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
African Swine Fever case detected in Neermarga Mangalore confirms DC. It is not a spreadable disease also he added.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm