ಬ್ರೇಕಿಂಗ್ ನ್ಯೂಸ್
05-11-22 11:55 am HK News Desk ಕರಾವಳಿ
ಮಂಗಳೂರು, ನ.4:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಪುತ್ತೂರು, ಸುಳ್ಯ, ಮೈಸೂರು, ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಆತನ ಸಹೋದರ ಎಸ್ಡಿಪಿಐ ಜಿಲ್ಲಾ ಸಮಿತಿ ಮುಖಂಡ ಇಕ್ಬಾಲ್ ಬೆಳ್ಳಾರೆಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ರಾಹಿಂ ಷಾ ಎಂಬ ಇನ್ನೊಬ್ಬನನ್ನು ಕೂಡ ಸುಳ್ಯದಲ್ಲಿ ಬಂಧಿಸಲಾಗಿದೆ. ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯಾಗಿದ್ದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಮನೆಯಿಂದ ಸುಲೇಮಾನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಶಾಫಿ ಬೆಳ್ಳಾರೆ ಅವರನ್ನು ಪೊಲೀಸರು ವಿಚಾರಣೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆನಂತರ, ಪಿಎಫ್ಐ ಸಂಘಟನೆ ನಿಷೇಧ ಮಾಡಲಾಗಿತ್ತು. ಶಾಫಿ ಮತ್ತು ಇಕ್ಬಾಲ್ ಇಬ್ಬರು ಕೂಡ ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಳ್ಳಾರೆ ಸೋದರರ ಪಾತ್ರದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಈ ಪೈಕಿ ಶಾಫಿ ಬೆಳ್ಳಾರೆ ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಲ್ಲಿ ಎನ್ಐಎ ಕೈಗೆ ಸಿಕ್ಕಿಬಿದ್ದಿದ್ದ ಎನ್ನಲಾಗುತ್ತಿದ್ದು ಇದೀಗ ಆತನ ಸೋದರ ಇಕ್ಬಾಲ್ ಮತ್ತು ಇಬ್ರಾಹಿಂ ಷಾ ಎಂಬವರನ್ನು ಬಂಧಿಸಲಾಗಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯನೂ ಆಗಿದ್ದ. ಈ ಮೂವರನ್ನು ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆಯೇ, ಪಿಎಫ್ಐ ನಂಟಿನ ಆರೋಪದಲ್ಲಿ ಬಂಧನ ಮಾಡಲಾಗಿದೆಯೇ ಎನ್ನುವುದು ದೃಢಪಟ್ಟಿಲ್ಲ.\
In connection to the BJP party worker Praveen Nettaru murder case, National Investigation Agency (NIA) officials raided the residences of the now banned Popular Front of India (PFI) and SDPI leaders across the state. It is learnt that NIA officials have detained three persons.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm