ಬ್ರೇಕಿಂಗ್ ನ್ಯೂಸ್
05-11-22 11:55 am HK News Desk ಕರಾವಳಿ
ಮಂಗಳೂರು, ನ.4:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಪುತ್ತೂರು, ಸುಳ್ಯ, ಮೈಸೂರು, ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಆತನ ಸಹೋದರ ಎಸ್ಡಿಪಿಐ ಜಿಲ್ಲಾ ಸಮಿತಿ ಮುಖಂಡ ಇಕ್ಬಾಲ್ ಬೆಳ್ಳಾರೆಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ರಾಹಿಂ ಷಾ ಎಂಬ ಇನ್ನೊಬ್ಬನನ್ನು ಕೂಡ ಸುಳ್ಯದಲ್ಲಿ ಬಂಧಿಸಲಾಗಿದೆ. ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯಾಗಿದ್ದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಮನೆಯಿಂದ ಸುಲೇಮಾನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಶಾಫಿ ಬೆಳ್ಳಾರೆ ಅವರನ್ನು ಪೊಲೀಸರು ವಿಚಾರಣೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆನಂತರ, ಪಿಎಫ್ಐ ಸಂಘಟನೆ ನಿಷೇಧ ಮಾಡಲಾಗಿತ್ತು. ಶಾಫಿ ಮತ್ತು ಇಕ್ಬಾಲ್ ಇಬ್ಬರು ಕೂಡ ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಳ್ಳಾರೆ ಸೋದರರ ಪಾತ್ರದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಈ ಪೈಕಿ ಶಾಫಿ ಬೆಳ್ಳಾರೆ ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಲ್ಲಿ ಎನ್ಐಎ ಕೈಗೆ ಸಿಕ್ಕಿಬಿದ್ದಿದ್ದ ಎನ್ನಲಾಗುತ್ತಿದ್ದು ಇದೀಗ ಆತನ ಸೋದರ ಇಕ್ಬಾಲ್ ಮತ್ತು ಇಬ್ರಾಹಿಂ ಷಾ ಎಂಬವರನ್ನು ಬಂಧಿಸಲಾಗಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯನೂ ಆಗಿದ್ದ. ಈ ಮೂವರನ್ನು ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆಯೇ, ಪಿಎಫ್ಐ ನಂಟಿನ ಆರೋಪದಲ್ಲಿ ಬಂಧನ ಮಾಡಲಾಗಿದೆಯೇ ಎನ್ನುವುದು ದೃಢಪಟ್ಟಿಲ್ಲ.\
In connection to the BJP party worker Praveen Nettaru murder case, National Investigation Agency (NIA) officials raided the residences of the now banned Popular Front of India (PFI) and SDPI leaders across the state. It is learnt that NIA officials have detained three persons.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm