ಬ್ರೇಕಿಂಗ್ ನ್ಯೂಸ್
05-11-22 11:55 am HK News Desk ಕರಾವಳಿ
ಮಂಗಳೂರು, ನ.4:ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಪುತ್ತೂರು, ಸುಳ್ಯ, ಮೈಸೂರು, ಹುಬ್ಬಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಆತನ ಸಹೋದರ ಎಸ್ಡಿಪಿಐ ಜಿಲ್ಲಾ ಸಮಿತಿ ಮುಖಂಡ ಇಕ್ಬಾಲ್ ಬೆಳ್ಳಾರೆಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ರಾಹಿಂ ಷಾ ಎಂಬ ಇನ್ನೊಬ್ಬನನ್ನು ಕೂಡ ಸುಳ್ಯದಲ್ಲಿ ಬಂಧಿಸಲಾಗಿದೆ. ಮೈಸೂರಿನಲ್ಲಿ ಪಿಎಫ್ಐ ಮಾಜಿ ಕಾರ್ಯದರ್ಶಿಯಾಗಿದ್ದ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಮನೆಯಿಂದ ಸುಲೇಮಾನನ್ನು ವಶಕ್ಕೆ ಪಡೆದಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ನಾಪತ್ತೆಯಾಗಿದ್ದ ಶಾಫಿ ಬೆಳ್ಳಾರೆ ಅವರನ್ನು ಪೊಲೀಸರು ವಿಚಾರಣೆಗಾಗಿ ಹುಡುಕಾಟ ನಡೆಸುತ್ತಿದ್ದರು. ಆನಂತರ, ಪಿಎಫ್ಐ ಸಂಘಟನೆ ನಿಷೇಧ ಮಾಡಲಾಗಿತ್ತು. ಶಾಫಿ ಮತ್ತು ಇಕ್ಬಾಲ್ ಇಬ್ಬರು ಕೂಡ ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಪಿಎಫ್ಐ ನಿಷೇಧ ಹಿನ್ನೆಲೆಯಲ್ಲಿ ಬೆಳ್ಳಾರೆ ಸೋದರರ ಪಾತ್ರದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಮತ್ತು ಎನ್ಐಎ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಈ ಪೈಕಿ ಶಾಫಿ ಬೆಳ್ಳಾರೆ ಕೆಲವು ದಿನಗಳ ಹಿಂದೆಯೇ ಬೆಂಗಳೂರಿನಲ್ಲಿ ಎನ್ಐಎ ಕೈಗೆ ಸಿಕ್ಕಿಬಿದ್ದಿದ್ದ ಎನ್ನಲಾಗುತ್ತಿದ್ದು ಇದೀಗ ಆತನ ಸೋದರ ಇಕ್ಬಾಲ್ ಮತ್ತು ಇಬ್ರಾಹಿಂ ಷಾ ಎಂಬವರನ್ನು ಬಂಧಿಸಲಾಗಿದೆ. ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತಿ ಸದಸ್ಯನೂ ಆಗಿದ್ದ. ಈ ಮೂವರನ್ನು ಪ್ರವೀಣ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆಯೇ, ಪಿಎಫ್ಐ ನಂಟಿನ ಆರೋಪದಲ್ಲಿ ಬಂಧನ ಮಾಡಲಾಗಿದೆಯೇ ಎನ್ನುವುದು ದೃಢಪಟ್ಟಿಲ್ಲ.\
In connection to the BJP party worker Praveen Nettaru murder case, National Investigation Agency (NIA) officials raided the residences of the now banned Popular Front of India (PFI) and SDPI leaders across the state. It is learnt that NIA officials have detained three persons.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm