ರಾಯಿ ಗ್ರಾ.ಪಂ. ಮಾಜಿ ಅಧ್ಯಕ್ಷರ ಮನೆಗೆ ಸಿಡಿಲು ಶಾಕ್ ; ಮನೆಗೆ ಹಾನಿ, ಕುಟುಂಬ ಅಪಾಯದಿಂದ ಪಾರು

05-11-22 08:24 pm       HK News Desk   ಕರಾವಳಿ

ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ.

ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.

ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.

Rahi gram panchyath former president house stricken with lightning, family escape death in Bantwal