ಬ್ರೇಕಿಂಗ್ ನ್ಯೂಸ್
06-11-22 11:31 am Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ಹಿರಿಯ ಆಟೋ ಚಾಲಕ, ಸಮಾಜ ಸೇವಕ 86 ವರ್ಷದ ಮೋಂತು ಲೋಬೋ ಇನ್ನಿಲ್ಲ. ಮಂಗಳೂರಿನಲ್ಲಿ ಸುದೀರ್ಘ 50 ವರ್ಷಗಳಿಂದಲೂ ಹೆಚ್ಚು ಕಾಲ ಆಟೋ ಚಾಲಕನಾಗಿ ಜನರಿಗೆ ಸೇವೆ ನೀಡುತ್ತಿದ್ದ ವೆಲೆನ್ಸಿಯಾ ನಿವಾಸಿ ಮೋಂತು ಲೋಬೊ ಶನಿವಾರ ನಿಧನರಾಗಿದ್ದಾರೆ.
ಆಟೋ ಚಾಲಕರಾಗಿದ್ದುಕೊಂಡೇ ಪರೋಪಕಾರಿ ಜೀವನ ಮಾಡುತ್ತಿದ್ದ ಮೋಂತು ಲೋಬೋ ಅವರನ್ನು ಭಾರತೀಯ ವಾಹನ ಚಾಲಕ ಚಾಲಕರ ಸಂಘದವರು 2012ರಲ್ಲಿ ಸಾರಥಿ ನಂಬರ್ ವನ್ ಎಂದು ಬಿರುದನ್ನಿತ್ತು ಗೌರವಿಸಿದ್ದರು. ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಸಭಾಂಗಣದಲ್ಲಿ ನಡೆದ ವಿಶ್ವ ಚಾಲಕರ ದಿನದಂದು ಮೋಂತು ಲೋಬೊ ಅವರಿಗೆ ಈ ಬಿರುದು ನೀಡಲಾಗಿತ್ತು.

ಕಂಕನಾಡಿ ಜಂಕ್ಷನ್ನಲ್ಲಿ ಆಟೋ ಚಾಲಕರಾಗಿ ಸೇವೆ ನೀಡುತ್ತಿದ್ದ ಲೋಬೊ ಅವರು ಬಡವರ ಸೇವೆಗೆ ಸದಾ ಸನ್ನದ್ಧ ಇರುತ್ತಿದ್ದರು. ಬಡವರ ಮನೆಗಳಲ್ಲಿ ನೀರಿನ ಪೈಪ್, ಶಾಲೆ, ಕಾಲೇಜು, ಆಸ್ಪತ್ರೆಗಳಲ್ಲಿ ನೀರಿನ ಪೈಪ್ ಕೆಟ್ಟು ಹೋಗಿದ್ದರೆ ಲೋಬೊ ಅವರು ಸರಿಪಡಿಸುತ್ತಿದ್ದರು. ಬಡ ಶಾಲಾ ಮಕ್ಕಳಿಗೆ ಯೂನಿಫಾರ್ಮ್ ಬಟ್ಟೆಗಳನ್ನು ತೆಗೆಸಿಕೊಡುತ್ತಿದ್ದರು. ಅನಾಥಾಶ್ರಮಗಳಿಗೆ ತರಕಾರಿ ತಂದು ಮುಟ್ಟಿಸುವ ಕೆಲಸವನ್ನೂ ಮಾಡುತ್ತಿದ್ದರು. ಹೀಗಾಗಿ ಅವರನ್ನು ಸ್ಥಳೀಯರು ಪರೋಪಕಾರಿ ಲೋಬೊ ಮಾಮ್ ಎಂದೇ ಗುರುತಿಸುತ್ತಿದ್ದರು.
50 ವರ್ಷಗಳಿಂದ ಸುದೀರ್ಘ ಕಾಲದಿಂದ ಆಟೋ ಚಾಲಕರಾಗಿದ್ದರೂ ಒಂದು ಬಾರಿಯೂ ಅವರ ಕೈಯಲ್ಲಿ ಅಪಘಾತ ಆಗಿರಲಿಲ್ಲ. ಪೊಲೀಸ್ ಕೇಸನ್ನೂ ಎದುರಿಸಿರಲಿಲ್ಲ. ಲೋಬೊ ಅವರ ಅವಿರತ ಸೇವೆಯನ್ನು ಪರಿಗಣಿಸಿ ಮಂಗಳೂರಿನ ಆರ್ ಟಿಓ ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ವತಿಯಿಂದ ಗೌರವಿಸಲಾಗಿತ್ತು. 2008ರಲ್ಲಿ ಆಗಿನ ಜಿಲ್ಲಾಧಿಕಾರಿ ಮಹೇಶ್ವರ ರಾವ್ ಸ್ವತಃ ಮೋಂತು ಲೋಬೊ ಅವರನ್ನು ಗೌರವಿಸಿದ್ದರು. 1957ರಲ್ಲಿ ಆಟೋ ಚಾಲಕರಾಗಿ ಮೊದಲ ಬಾರಿಗೆ ಲೈಸನ್ಸ್ ಪಡೆದಿದ್ದರು. ಆ ಕಾಲದಲ್ಲಿ ಆಟೋ ಚಾಲಕ ಲೈಸನ್ಸ್ ಪಡೆದ ಲೋಬೊ ಅವರು ಜಿಲ್ಲೆಯಲ್ಲಿ ಮೊದಲ ಅಧಿಕೃತ ಆಟೋ ಚಾಲಕ ಎಂಬ ಹೆಸರನ್ನೂ ಪಡೆದಿದ್ದಾರೆ.
Monthu Lobo, an auto rickshaw driver and an avid philanthropist, passed away on Saturday November 5. He was 86. Hailing from Valencia parish, Lobo, a zealous auto driver, was an example to his colleagues. He rendered his service to society for after work.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm