ಬ್ರೇಕಿಂಗ್ ನ್ಯೂಸ್
06-11-22 06:10 pm Mangalore Correspondent ಕರಾವಳಿ
ಉಳ್ಳಾಲ, ನ.6 : ಕಳೆದ ನ.1 ರ ಮಂಗಳವಾರ ರಾತ್ರಿ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಗೆ ನುಗ್ಗಿ ಆರು ಕಾಣಿಕೆ ಹುಂಡಿಯಿಂದ ನಗದು ಕಳವುಗೈದಿದ್ದ ಐನಾತಿ ಖದೀಮನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮೊಡಂಕಾಪು,ಪಲ್ಲಮಜಲು ನಿವಾಸಿ ಮಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು(54) ಬಂಧಿತ ಆರೋಪಿ. ಈತನ ವಿರುದ್ಧ ಕಾರ್ಕಳ ಠಾಣೆಯಲ್ಲಿ ಮೂರು, ಮೂಡುಬಿದ್ರೆ, ಬಂಟ್ವಾಳ ನಗರ ಠಾಣೆಗಳಲ್ಲಿ ತಲಾ ಒಂದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದೆ. ಇತ್ತೀಚೆಗೆ ಬಂಟ್ವಾಳದ ಅಜ್ಜಿಬೆಟ್ಟು ದೇವಸ್ಥಾನ ಒಂದರಲ್ಲೂ ಈತ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ.
ಮಂಗಳವಾರ ಮಧ್ಯರಾತ್ರಿ ವೇಳೆ ಅರ್ಕಾಣ ಜುಮಾ ಮಸೀದಿಯ ಪಕ್ಕದ ಕೋಣೆಯೊಂದರಲ್ಲಿದ್ದ ಪಿಕ್ಕಾಸು, ಹಾರೆಯನ್ನ ಬಳಸಿ ಮಸೀದಿಯ ಆವರಣ ಗೋಡೆಯಲ್ಲಿದ್ದ ಒಟ್ಟು ಆರು ಕಾಣಿಕೆ ಹುಂಡಿಗಳನ್ನ ಒಡೆದು ನಗದು ಕಳವುಗೈಯಲಾಗಿತ್ತು. ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಓರ್ವ ವ್ಯಕ್ತಿಯೇ ಕೈಚಳಕ ತೋರಿದ್ದ ದೃಶ್ಯ ಸೆರೆಯಾಗಿತ್ತು.
ಮೊದಲು ಹೊರಗಿನ ಕಾಣಿಕೆ ಡಬ್ಬಿಯನ್ನು ಮುರಿದ ಕಳ್ಳ ಬಳಿಕ ಹಾರೆಯ ಸಹಾಯದಿಂದ ಮಸೀದಿಯ ಬಾಗಿಲಿನ ಚಿಲಕವನ್ನು ಒಡೆದು ಒಳಗೆ ನುಗ್ಗಿ ಅಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದ. ಅಲ್ಲದೆ ಮಸೀದಿ ಕಚೇರಿಯ ಬಾಗಿಲನ್ನೂ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ. ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಯು.ಟಿ ಖಾದರ್ ಅವರು ಭೇಟಿ ನೀಡಿ ಕಳ್ಳತನ ಆರೋಪಿಯನ್ನ ಶೀಘ್ರ ಬಂಧಿಸುವಂತೆ ಕೊಣಾಜೆ ಪೊಲೀಸರಿಗೆ ಆಗ್ರಹಿಸಿದ್ದರು. ಸಿಸಿಟಿವಿ ದಾಖಲೆ ಆಧಾರದಲ್ಲಿ ಕೊಣಾಜೆ ಪೊಲೀಸರು ತನಿಖೆ ನಡೆಸಿ ಖದೀಮ ಇಕ್ಬಾಲನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.
ಪಜೀರು ಮಸೀದಿಗೆ ಕನ್ನ ಹಾಕಿದ ಕಳ್ಳರು ; ಮಸೀದಿಗೆ ನುಗ್ಗಿ ಆರು ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ಕಳವು
Mangalore Phajeer mosque robbery accused thief arrested by Konaje police. Six offering boxes of the mosque were broken and stolen but the Konaje police have nabbed the accused as soon as possible.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm