ಬ್ರೇಕಿಂಗ್ ನ್ಯೂಸ್
07-11-22 04:51 pm Mangalore Correspondent ಕರಾವಳಿ
ಮಂಗಳೂರು, ನ.7: ಸ್ಮಾರ್ಟ್ ಸಿಟಿ ಯೋಜನೆಯಡಿ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡಲಾಗುತ್ತಿದೆ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಪ್ರಮುಖರು ಸೋಮವಾರ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್ ಅವರನ್ನು ಭೇಟಿಯಾಗಿ ಮನವಿ ಒಪ್ಪಿಸಿದ್ದಾರೆ.
ಹೊಸ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡಬಾರದು. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವ ಮಧ್ಯೆಯೇ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡಿದರೆ ಅಕ್ರಮ ಗೋಹತ್ಯೆಗೆ ಪ್ರಚೋದನೆ ನೀಡಿದಂತಾಗುತ್ತದೆ. ಇದರಿಂದ ಸಮಾಜದಲ್ಲಿ ಅಶಾಂತಿಕ ಕಾರಣವಾಗುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಕಾಮತ್, ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಬೀಫ್ ಸ್ಟಾಲ್ ಗಳನ್ನು ಪ್ರಸ್ತಾವನೆಯಲ್ಲಿ ರದ್ದುಪಡಿಸದೇ ಇದ್ದರೆ ಮಾರುಕಟ್ಟೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದೇ ಇಲ್ಲ ಎಂದು ಹೇಳಿದರು.
ಹಿಂದಿನ ಸರಕಾರ ಇದ್ದಾಗಲೇ ಹೊಸ ಮಾರುಕಟ್ಟೆಯ ಪ್ಲಾನ್ ಮಾಡಲಾಗಿತ್ತು. ಬಿಜೆಪಿ ಸರಕಾರ ಇತ್ತೀಚೆಗೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದ್ದು ಅದರ ಪ್ರಕಾರ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡಲಾಗದು. ಈ ಹಿಂದೆಯೇ ಮಾರುಕಟ್ಟೆಯ ಕಾಮಗಾರಿ ಶುರುವಾಗಬೇಕಿತ್ತು. ಆದರೆ ಕಾಂಗ್ರೆಸ್ ನವರು ಮಾರುಕಟ್ಟೆ ಕಾಮಗಾರಿಗೆ ತಡೆ ತಂದಿದ್ದರಿಂದ ವಿಳಂಬ ಆಗಿತ್ತು. ಈಗ ಎಲ್ಲ ಅಡೆತಡೆಗಳು ನಿವಾರಣೆಯಾಗಿದ್ದು, ಶೀಘ್ರದಲ್ಲೇ ಸೆಂಟ್ರಲ್ ಮಾರುಕಟ್ಟೆಯ ಕಾಮಗಾರಿ ಆರಂಭಗೊಳ್ಳಲಿದೆ. ಅಕ್ರಮ ಗೋಹತ್ಯೆ ತಡೆಯುವ ನಿಟ್ಟಿನಲ್ಲಿ ಬೀಫ್ ಸ್ಟಾಲ್ ಹಾಕುವುದಕ್ಕೂ ಅವಕಾಶ ನೀಡುವುದಿಲ್ಲ.
ಗೋಹತ್ಯೆ ನಿಷೇಧ ಕಾಯ್ದೆಯಡಿ ಅಕ್ರಮ ಗೋಹತ್ಯೆ ಪತ್ತೆಯಾದರೆ, ಅಲ್ಲಿನ ಆಸ್ತಿ ಮುಟ್ಟುಗೋಲು ಹಾಕಲು ಅವಕಾಶವಿದೆ. ಅದರಂತೆ, ಮಂಗಳೂರಿನ ಹಲವೆಡೆ ಕಾನೂನು ಕ್ರಮ ಜರುಗಿಸಲಾಗಿದೆ. ಇದರಿಂದ ಜನರಿಗೂ ಅರಿವು ಬಂದಿದ್ದು, ಅಕ್ರಮ ಗೋಹತ್ಯೆಗೆ ಕಡಿವಾಣ ಬೀಳಲಿದೆ ಎಂದು ವೇದವ್ಯಾಸ ಕಾಮತ್ ಹೇಳಿದರು. ಶಿವಾನಂದ ಮೆಂಡನ್, ಗೋಪಾಲ ಕುತ್ತಾರ್, ಪುನೀತ್ ಅತ್ತಾವರ ಸೇರಿದಂತೆ ಹಲವರು ವಿಹಿಂಪ ನಿಯೋಗದಲ್ಲಿದ್ದರು.
Responding to the matter of allowing beef stalls to operate in central market building, MLA Vedavyas Kamath on Monday November 7 said, “Vishwa Hindu Parishad (VHP) leaders have objected allocating beef stalls in central market that will be newly built. This market is the oldest market in my constituency
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm