ಬಂಟ್ವಾಳ ; ನೇತ್ರಾವತಿ ನದಿಗೆ ಈಜಲು ತೆರಳಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು 

11-11-22 07:39 pm       Mangalore Correspondent   ಕರಾವಳಿ

ನೇತ್ರಾವತಿ ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬಂಟ್ವಾಳ, ನ.11 : ನೇತ್ರಾವತಿ ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಶುಕ್ರವಾರ ಕನಕ ಜಯಂತಿ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ನಾಲ್ಕು ಮಂದಿ ಗೆಳೆಯರು ಸಂಜೆ ವೇಳೆಗೆ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈಜಾಡುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.

ಮೃತ ಸಲ್ಮಾನ್ ಬಿ.ಸಿ.ರೋಡ್ ಕೈಕಂಬದ ಬೆಸ್ಟ್‌ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Mangalore SSLC student drowned in Netravati river after going to Swimming in Bantwal.