ಬ್ರೇಕಿಂಗ್ ನ್ಯೂಸ್
12-11-22 09:06 pm Mangalore Correspondent ಕರಾವಳಿ
ಮಂಗಳೂರು, ನ.12: ಬದಿಯಡ್ಕದ ದಂತವೈದ್ಯ ಕೃಷ್ಣಮೂರ್ತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಮಂಗಳೂರಿನ ಬಿಜೆಪಿ ಶಾಸಕರು ಮತ್ತು ಹಿಂದು ಸಂಘಟನೆಗಳ ನಾಯಕರು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿಗೆ ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ, ವೈದ್ಯರ ಸಾವಿನ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಬದಿಯಡ್ಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದರೂ, ಕೇರಳ ಸರಕಾರದ ತನಿಖೆಯ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕುಂದಾಪುರದಲ್ಲಿ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಅಲ್ಲಿಯೇ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹ ಮಾಡಿದ್ದಾರೆ.

ವೈದ್ಯರ ಸಾವಿನ ಹಿಂದೆ ಲ್ಯಾಂಡ್ ಜಿಹಾದ್ ಇದೆ, ಪ್ರಬಲ ಮಾಫಿಯಾ ಕೈವಾಡವೂ ಇದೆಯೆಂದು ಗೃಹ ಸಚಿವರ ಗಮನಕ್ಕೆ ಹಿಂದು ಸಂಘಟನೆ ಮುಖಂಡರು ತಂದಿದ್ದಾರೆ. ಬದಿಯಡ್ಕದಲ್ಲಿ ಕ್ಲಿನಿಕ್ ಹೊಂದಿದ್ದ ಡಾ.ಕೃಷ್ಣಮೂರ್ತಿಯವರು ನ.8ರಂದು ನಾಪತ್ತೆಯಾಗಿದ್ದು, ಮರುದಿನ ನ.9ರಂದು ಕುಂದಾಪುರದ ಹಟ್ಟಿಯಂಗಡಿ ಬಳಿ ರೈಲು ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆದರೆ ವೈದ್ಯರದ್ದು ಸಹಜ ಸಾವಲ್ಲ. ಕೊಲೆಯಾಗಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಕೊಲೆಗೆ ಶಂಕೆಗೀಡು ಮಾಡುವ ಬಹಷ್ಟು ವಿಚಾರಗಳಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಬೇಕು. ಶವ ಪತ್ತೆಯಾದ ನೆಪದಲ್ಲಿ ಕುಂದಾಪುರದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದರೆ ಸತ್ಯಾಂಶ ಹೊರಬಂದೀತು ಎಂದು ಶರಣ್ ಪಂಪ್ವೆಲ್, ಗೃಹ ಸಚಿವರ ಗಮನಕ್ಕೆ ತಂದಿದ್ದಾರೆ.
Badiyadka Dr Krishnamurthy death, land Jihad exposed, Hindu organization seek probe, meet HM Karnataka
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 12:47 pm
HK News Desk
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm