ಬ್ರೇಕಿಂಗ್ ನ್ಯೂಸ್
15-11-22 01:00 pm Mangalore Correspondent ಕರಾವಳಿ
ಮಂಗಳೂರು, ನ.15: ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವ ಕುರಿತಾದ ರಾಜ್ಯ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರೊಂದಿಗೆ ಕಳೆದ ಒಂದು ವರ್ಷದಿಂದ ಸಿಆರ್ಝಡ್ ವಲಯದಲ್ಲಿ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿಆರ್ಝಡ್ನಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ 57 ಮಂದಿ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಶೀಲಿಸಿ ಅನುಷ್ಠಾನಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಮರಳು ಗುತ್ತಿಗೆದಾರರಿಗೆ ಪರವಾನಿಗೆ ನೀಡುವ ಕುರಿತು ಮುಂದಿನ ಪ್ರಕ್ರಿಯೆಗಳು ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮನವಿ ಪುರಸ್ಕರಿಸಿದ ಹೈಕೋರ್ಟ್
ದ.ಕ. ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಿಆರ್ಝಡ್ನಲ್ಲಿ ಯಂತ್ರೋಪಕರಣ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ.3 ಹಾಗೂ ಅ.10ರಂದು ಆದೇಶ ನೀಡಿತ್ತು.
ಈ ಬಾರಿ ಸಿಆರ್ಝಡ್ ವಲಯದ ನೇತ್ರಾವತಿ ನದಿಯಲ್ಲಿ 9 ಬ್ಲಾಕ್ಗಳು ಹಾಗೂ ಫಲ್ಗುಣಿ ನದಿಯಲ್ಲಿ 5 ಬ್ಲಾಕ್ಗಳು ಸೇರಿದಂತೆ ಒಟ್ಟು 14 ಬ್ಲಾಕ್ಗಳಲ್ಲಿ (ದಿಬ್ಬ) ಮರಳು ತೆರವಿಗೆ ಕೆಸಿಝಡ್ಎಂ ಪರಿಸರ ವಿಮೋಚನಾ ಪತ್ರ (ಇಸಿ ಕ್ಲಿಯರೆನ್ಸ್ ) ನೀಡಲಾಗಿತ್ತು. ಕಳೆದ ಬಾರಿ ಒಟ್ಟು 105 ಮಂದಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ 57 ಮಂದಿಯಲ್ಲದೆ ಪರವಾನಿಗೆ ಹೊಂದಿದ್ದ ಇತರರಿಗೂ ಮರಳುಗಾರಿಕೆ ನಡೆಸಲು ಅವಕಾಶ ಲಭಿಸುವ ಸಾಧ್ಯತೆಗಳಿವೆ.
CRZ zone allowed to have sand mining in Mangalore, Dakshina Kannada administration open for permit
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm