ಬ್ರೇಕಿಂಗ್ ನ್ಯೂಸ್
15-11-22 01:00 pm Mangalore Correspondent ಕರಾವಳಿ
ಮಂಗಳೂರು, ನ.15: ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವ ಕುರಿತಾದ ರಾಜ್ಯ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರೊಂದಿಗೆ ಕಳೆದ ಒಂದು ವರ್ಷದಿಂದ ಸಿಆರ್ಝಡ್ ವಲಯದಲ್ಲಿ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿಆರ್ಝಡ್ನಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ 57 ಮಂದಿ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಶೀಲಿಸಿ ಅನುಷ್ಠಾನಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಮರಳು ಗುತ್ತಿಗೆದಾರರಿಗೆ ಪರವಾನಿಗೆ ನೀಡುವ ಕುರಿತು ಮುಂದಿನ ಪ್ರಕ್ರಿಯೆಗಳು ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮನವಿ ಪುರಸ್ಕರಿಸಿದ ಹೈಕೋರ್ಟ್
ದ.ಕ. ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಿಆರ್ಝಡ್ನಲ್ಲಿ ಯಂತ್ರೋಪಕರಣ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ.3 ಹಾಗೂ ಅ.10ರಂದು ಆದೇಶ ನೀಡಿತ್ತು.
ಈ ಬಾರಿ ಸಿಆರ್ಝಡ್ ವಲಯದ ನೇತ್ರಾವತಿ ನದಿಯಲ್ಲಿ 9 ಬ್ಲಾಕ್ಗಳು ಹಾಗೂ ಫಲ್ಗುಣಿ ನದಿಯಲ್ಲಿ 5 ಬ್ಲಾಕ್ಗಳು ಸೇರಿದಂತೆ ಒಟ್ಟು 14 ಬ್ಲಾಕ್ಗಳಲ್ಲಿ (ದಿಬ್ಬ) ಮರಳು ತೆರವಿಗೆ ಕೆಸಿಝಡ್ಎಂ ಪರಿಸರ ವಿಮೋಚನಾ ಪತ್ರ (ಇಸಿ ಕ್ಲಿಯರೆನ್ಸ್ ) ನೀಡಲಾಗಿತ್ತು. ಕಳೆದ ಬಾರಿ ಒಟ್ಟು 105 ಮಂದಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ 57 ಮಂದಿಯಲ್ಲದೆ ಪರವಾನಿಗೆ ಹೊಂದಿದ್ದ ಇತರರಿಗೂ ಮರಳುಗಾರಿಕೆ ನಡೆಸಲು ಅವಕಾಶ ಲಭಿಸುವ ಸಾಧ್ಯತೆಗಳಿವೆ.
CRZ zone allowed to have sand mining in Mangalore, Dakshina Kannada administration open for permit
01-04-26 08:56 pm
HK News Staffer
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm