ಬ್ರೇಕಿಂಗ್ ನ್ಯೂಸ್
15-11-22 01:00 pm Mangalore Correspondent ಕರಾವಳಿ
ಮಂಗಳೂರು, ನ.15: ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್) ದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆಗೆ ಅನುಮತಿ ನೀಡುವ ಕುರಿತಾದ ರಾಜ್ಯ ಹೈಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರೊಂದಿಗೆ ಕಳೆದ ಒಂದು ವರ್ಷದಿಂದ ಸಿಆರ್ಝಡ್ ವಲಯದಲ್ಲಿ ಸ್ಥಗಿತಗೊಂಡಿದ್ದ ಮರಳುಗಾರಿಕೆ ಮತ್ತೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಿಆರ್ಝಡ್ನಲ್ಲಿ ಮರಳುಗಾರಿಕೆಗೆ ಅನುಮತಿ ನೀಡುವಂತೆ 57 ಮಂದಿ ಸಾಂಪ್ರದಾಯಿಕ ಮರಳು ಗುತ್ತಿಗೆದಾರರು ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಶೀಲಿಸಿ ಅನುಷ್ಠಾನಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಮರಳು ಗುತ್ತಿಗೆದಾರರಿಗೆ ಪರವಾನಿಗೆ ನೀಡುವ ಕುರಿತು ಮುಂದಿನ ಪ್ರಕ್ರಿಯೆಗಳು ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮನವಿ ಪುರಸ್ಕರಿಸಿದ ಹೈಕೋರ್ಟ್
ದ.ಕ. ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆಗೆ ಜಿಲ್ಲಾಡಳಿತ ವಿಧಿಸಿದ್ದ ನಿಷೇಧವನ್ನು ಪ್ರಶ್ನಿಸಿ 57 ಮಂದಿ ತಾತ್ಕಾಲಿಕ ಪರವಾನಿಗೆದಾರರು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಿಆರ್ಝಡ್ನಲ್ಲಿ ಯಂತ್ರೋಪಕರಣ ಬಳಸದೆ ಮಾನವ ಶ್ರಮದ ಮೂಲಕ ಮರಳುಗಾರಿಕೆ ನಡೆಸುವ ಬಗ್ಗೆ ಸೆ.3 ಹಾಗೂ ಅ.10ರಂದು ಆದೇಶ ನೀಡಿತ್ತು.
ಈ ಬಾರಿ ಸಿಆರ್ಝಡ್ ವಲಯದ ನೇತ್ರಾವತಿ ನದಿಯಲ್ಲಿ 9 ಬ್ಲಾಕ್ಗಳು ಹಾಗೂ ಫಲ್ಗುಣಿ ನದಿಯಲ್ಲಿ 5 ಬ್ಲಾಕ್ಗಳು ಸೇರಿದಂತೆ ಒಟ್ಟು 14 ಬ್ಲಾಕ್ಗಳಲ್ಲಿ (ದಿಬ್ಬ) ಮರಳು ತೆರವಿಗೆ ಕೆಸಿಝಡ್ಎಂ ಪರಿಸರ ವಿಮೋಚನಾ ಪತ್ರ (ಇಸಿ ಕ್ಲಿಯರೆನ್ಸ್ ) ನೀಡಲಾಗಿತ್ತು. ಕಳೆದ ಬಾರಿ ಒಟ್ಟು 105 ಮಂದಿಗೆ ಮರಳುಗಾರಿಕೆಗೆ ಪರವಾನಿಗೆ ನೀಡಲಾಗಿತ್ತು. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ 57 ಮಂದಿಯಲ್ಲದೆ ಪರವಾನಿಗೆ ಹೊಂದಿದ್ದ ಇತರರಿಗೂ ಮರಳುಗಾರಿಕೆ ನಡೆಸಲು ಅವಕಾಶ ಲಭಿಸುವ ಸಾಧ್ಯತೆಗಳಿವೆ.
CRZ zone allowed to have sand mining in Mangalore, Dakshina Kannada administration open for permit
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am