ಬ್ರೇಕಿಂಗ್ ನ್ಯೂಸ್
15-11-22 07:15 pm Mangalore Correspondent ಕರಾವಳಿ
ಉಳ್ಳಾಲ, ನ.15 : ಜಗತ್ತಿನಾದ್ಯಂತ ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು.
ಅವರಿಂದು ಕಲ್ಲಾಪಿನ ಬುರ್ದುಗೋಳಿಯ ಗುಳಿಗ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂಬ, ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು ಸಪ್ತಮಿ ಗೌಡ ಅವರನ್ನ ಬರಮಾಡಿ ಕ್ಷೇತ್ರದ ಐತಿಹ್ಯವನ್ನ ತಿಳಿಸಿದರು.


ಈ ವೇಳೆ ಮಾತನಾಡಿದ ಸಪ್ತಮಿ ಅವರು ವಿಶ್ವದಾದ್ಯಂತ ಕಾಂತಾರ ಸಿನಿಮಾ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣದ ವೇಳೆ ಕರಾವಳಿ ಭಾಗದ ಆಚರಣೆ, ಸಂಸ್ಕೃತಿ, ದೈವಾರಾಧನೆ ಬಗ್ಗೆ ನಾನು ತಿಳಿದುಕೊಂಡೆ. ಇತ್ತೀಚೆಗೆ ನಡೆದ ವೈಯಕ್ತಿಕ ಘಟನೆಯೊಂದು ದೈವಗಳ ಬಗ್ಗೆ ಹುಟ್ಟಿದ ನಂಬಿಕೆ ಗಟ್ಟಿಯಾಗುವಂತೆ ಮಾಡಿದೆ. ಈಗಾಗಲೇ ಸಿನಿಮಾಗಳಲ್ಲಿ ನಟಿಸಲು ಸಾಕಷ್ಟು ಅವಕಾಶಗಳು ಬಂದಿದ್ದು ಸ್ಕ್ರಿಪ್ಟ್ ರೀಡಿಂಗ್ ನಡೀತಾ ಇದೆ. ಜನರ ಪ್ರೀತಿಯಿಂದ ಜಗತ್ತಿನಾದ್ಯಂತ ಕಾಂತಾರ ಹೌಸ್ ಫುಲ್ ಆಗಿ ಓಡುತ್ತಿದ್ದು ತುಳುನಾಡಿನ ದೈವಗಳ ಆಶೀರ್ವಾದವೇ ಚಿತ್ರಕ್ಕೆ ಶ್ರೀರಕ್ಷೆ ಎಂದರು.


ಬಳಿಕ ಅವರು ಕುತ್ತಾರಿನ ಕೊರಗಜ್ಜನ ಆದಿಸ್ಥಳಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಸಪ್ತಮಿ ಗೌಡರ ತಾಯಿ ಶಾಂತ, ನಟ ಸನಿಲ್ ಗುರು, ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನ ಪ್ರಮುಖರಾದ ಪ್ರವೀಣ್ ಎಸ್ .ಕುಂಪಲ, ಪುರುಷೋತ್ತಮ ಕಲ್ಲಾಪು, ಕಿಶೋರ್ ಕುಂಪಲ, ಕೌಶಿಕ್ ಸೇವಂತಿ ಗುಡ್ಡೆ, ಗೀತೇಶ್ ಮೊದಲಾದವರು ಜತೆಗಿದ್ದರು.
Kantara movie actress Sapthami Gowda visits koraga daiva temple at Ullal in Mangalore. Says success of the Kantara movie is only because of Daiva.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm