ಬ್ರೇಕಿಂಗ್ ನ್ಯೂಸ್
18-11-22 10:29 pm Udupi Correspondent ಕರಾವಳಿ
ಉಡುಪಿ, ನ.18: ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆ ಬುದ್ದಿವಂತಿಕೆಯೂ ಅಗತ್ಯ. ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ. ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಇಂದು ಉಡುಪಿಗೆ ಆದಿ ಹೆಲಿಪ್ಯಾಡ್ಗೆ ಬಂದಿಳಿದ ರಾಜನಾಥ್ ಸಿಂಗ್ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ಹಾಗೂ ಸರಕಾರದ ಹಿರಿಯ ಅಧಿಕಾರಿಗಳು ಪೋಲಿಸ್ ಅಧಿಕಾರಿಗಳು ಬಿಜೆಪಿಯ ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ಉಡುಪಿಯ ಮಣಿಪಾಲ ಮಾಹೆ ವಿವಿಯ 30ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿದರು.

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಆದರೆ ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡದೆ ಬಿಡುವುದಿಲ್ಲ ಎಂದು ಹೇಳಿದರು.

ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ. ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ. ಭಾರತ 2047ಕ್ಕೆ ಪ್ರಪಂಚ ಮೊದಲ ಸ್ಥಾನದಲ್ಲಿ ನಿಲ್ಲಲಿದೆ.ದೇಶವನ್ನು ಐದು ಟ್ರಿಲಿಯನ್ ಆರ್ಥಿಕ ರಾಷ್ಟ್ರ ಮಾಡುವುದು ಪ್ರಧಾನಿ ಮೋದಿ ಕನಸು. ದೇಶದ ಯುವ ಜನಾಂಗ ಇದಕ್ಕೆ ಕೊಡುಗೆ ನೀಡುತ್ತಿದೆ ಎಂದರು.

ಗ್ಲೋಬಲ್ ಸಿಟಿಜನ್ ನಿರ್ಮಿಸಲು ಎನ್ಇಪಿ ಜಾರಿಗೆ ತಂದಿದ್ದೇವೆ. ಮಾಹೆ ವಿವಿಯ ಸತ್ಯ ನಾಡೆಳ್ಳಾ ಮೈಕೋಸಾಫ್ಟ್ ನ ನೇತೃತ್ವ ವಹಿಸಿದ್ದಾರೆ. ಮೈಕ್ರೋಸಾಫ್ಟ್ ಮೀರಿಸುವಂತಹ ಕಂಪನಿ ಭಾರತದಲ್ಲಿ ಸ್ಥಾಪನೆ ಆಗಬೇಕು. ಅಂತಾರಾಷ್ಟ್ರೀಯ ಕಂಪನಿಗಳ ಸಿಇಒಗಳು ಭಾರತ ಮೂಲದವರು ಎಂಬುದು ನಮ್ಮ ಹೆಗ್ಗಳಿಕೆ ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತ ಹಲವಾರು ವರ್ಷಗಳಿಂದ ಸಾಧನೆ ಮಾಡಿಕೊಂಡು ಬಂದಿದೆ. ಈ ಬಗೆಗಿನ ನಮ್ಮ ಅಭಿಮಾನವನ್ನು ಕೆಲವರು ಹೆಚ್ಚುಗಾರಿಕೆ ಎಂದು ಟೀಕಿಸುತ್ರಾರೆ. ಇತಿಹಾಸವನ್ನು ತಿಳಿದುಕೊಳ್ಳದ ವ್ಯಕ್ತಿಗಳು ಇಂತಹ ಟೀಕೆಗಳನ್ನು ಮಾಡುತ್ತಾರೆ. ಭಾರತೀಯರು ಕೊಟ್ಟ ಶೂನ್ಯ ಇರದ ಗಣಿತವನ್ನು ಊಹಿಸಲು ಸಾಧ್ಯವಿಲ್ಲ. ಪೈಥಾಗೋರಸನ ಪ್ರಮೇಯವನ್ನು ಬೋದಾಯನ ಋಷಿ 300 ವರ್ಷಗಳ ಹಿಂದೆಯೇ ಹೇಳಿದ್ದ ಎಂದು ರಕ್ಷಣಾ ಸಚಿವರು ತಿಳಿಸಿದರು.
“The youth should innovate, develop new technologies, and set up companies, research establishments and start-ups in the country to realise prime minister Narendra Modi’s vision of a strong and self-reliant new India,” said Rajnath Singh, Defence minister of India in Manipal on November 18, 2022.He was addressing the graduates and post graduate students of Manipal Academy of Higher Education (MAHE) during its 30th convocation ceremony.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am