ಬ್ರೇಕಿಂಗ್ ನ್ಯೂಸ್
19-11-22 12:32 pm Mangalore Correspondent ಕರಾವಳಿ
ಮಂಗಳೂರು, ನ.19 : ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಲೋಕಾರ್ಪಣೆ ಮಾಡಿದರು.
ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿದ್ಯ ವಹಿಸಿದ್ದರು. ಸಚಿವರಾದ ಎಸ್. ಅಂಗಾರ, ಡಾ. ಅಶ್ವತ್ಥ್ ನಾರಾಯಣ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ಹರೀಶ ಪೂಂಜ, ಯು.ಟಿ. ಖಾದರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಇತರೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
ರಾಮಯ್ಯ ಗೌಡರು ಕ್ರಾಂತಿಕಾರಿ ಪುರುಷ ; ಮುಖ್ಯಮಂತ್ರಿ
ಪ್ರತಿಮೆ ಲೋಕಾರ್ಪಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಂಗಳೂರಿಗೆ ಇವತ್ತು ಮಹತ್ವದ ದಿನ, ಇತಿಹಾಸಕ್ಕೆ ಮಹತ್ವ ಕೊಡುವ ದಿನ. ಬೆಳಕಿಗೆ ಬಾರದ ರಾಮಯ್ಯ ಗೌಡರ ಕಥೆ ಈಗ ಸುದ್ದಿಗೆ ಬಂದಿದೆ. ರಾಮಯ್ಯ ಗೌಡರಂಥವರ ನಿರಂತರ ಹೋರಾಟದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇತಿಹಾಸದಲ್ಲಿ ಇಂಥಹ ಮತ್ತಷ್ಟು ಸತ್ಯಗಳು ಹೊರಗೆ ಬರಬೇಕಿದೆ.
ರಾಮಯ್ಯ ಗೌಡ ಒಬ್ಬ ಶ್ರೇಷ್ಠ ಕ್ರಾಂತಿಕಾರಿ ಪುರುಷ. ಮೊದಲ ಬಾರಿಗೆ ಬ್ರಿಟಿಷರನ್ನು ಸೋಲಿನ ರುಚಿ ತೋರಿಸಿದ್ದರು. ಅವರನ್ನು ಸೋಲಿಸಲು ಬ್ರಿಟಿಷ್ ಸೈನ್ಯ ಒಟ್ಟಾಗಿ ಬಂದು ಕೊನೆಗೆ ಗಲ್ಲಿಗೇರಿಸಿತು. ಇಂಥಹ ಹೋರಾಟದ ಕಥೆ ಇಡೀ ದೇಶಕ್ಕೆ ಪರಿಚಯ ಆಗಬೇಕು. ಇದೀಗ ಅವರ ಮೂರ್ತಿ ಸ್ಥಾಪನೆ ಮೂಲಕ ಅವರ ಇತಿಹಾಸ ಜಗತ್ತಿಗೆ ಗೊತ್ತಾಗಿದೆ. ಇಂತಹ ಅನಾಮಧೇಯ ಹೋರಾಟಗಾರರು ನಮ್ಮಲ್ಲಿ ಬಹಳಷ್ಟು ಜನ ಇದ್ದಾರೆ. ಇಂಥ ಅನಾಮಧೇಯ ಹೋರಾಟಗಾರರ ಸ್ಮಾರಕ ಮಾಡಲು ನಮಗೆ ಸ್ಪೂರ್ತಿ ಬಂದಿದೆ. ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇವತ್ತಿನ ಪೀಳಿಗೆಗೆ ಇದನ್ನ ತಿಳಿ ಹೇಳಿ ಸ್ಫೂರ್ತಿ ತುಂಬುವ ಕೆಲಸ ಆಗಬೇಕಿದೆ ಎಂದು ಹೇಳಿದರು.
Rs 40 Lakhs Statue of Freedom Fighter Kedambadi Ramaiah Gowda Unveiled at Tagore Park by Karnataka CM Bommai. Late Gowda had launched the freedom struggle way back in 1837 against the British. The Dakshina Kannada district administration, the Mangaluru City Corporation, and the Swatantrya Horatagara Sri Kedambadi Ramaiah Gowda Smaraka Ustuvari Samithi jointly conducted the programme.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm