ಬ್ರೇಕಿಂಗ್ ನ್ಯೂಸ್
19-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.19: ನಗರದ ಕಂಕನಾಡಿ ನಾಗುರಿ ಪೊಲೀಸ್ ಠಾಣೆ ಬಳಿಯಲ್ಲೇ ನಿಗೂಢ ಸ್ಫೋಟ ಆಗಿದೆ. ಆಟೋ ಚಲಿಸುತ್ತಿದ್ದಾಗಲೇ ಒಳಗಿನಿಂದ ಸ್ಫೋಟ ಆಗಿದ್ದು, ಆಟೋ ಚಾಲಕ ಮತ್ತು ಪ್ರಯಾಣಿಕ ಗಾಯಗೊಂಡಿದ್ದಾರೆ. ಬ್ಲಾಸ್ಟ್ ಯಾವ ರೀತಿಯದ್ದು, ಹೇಗೆ ಸಂಭವಿಸಿದೆ ಎನ್ನುವುದು ದೃಢಪಟ್ಟಿಲ್ಲ.
ಆಟೋ ನಾಗುರಿಯಿಂದ ಹೆದ್ದಾರಿಯಲ್ಲಿ ಪಂಪ್ವೆಲ್ ಕಡೆಗೆ ಚಲಿಸುತ್ತಿತ್ತು. ಸಂಜೆ 5.30ರ ವೇಳೆಗೆ ಘಟನೆ ಸಂಭವಿಸಿದ್ದು, ಆಟೋ ಚಲಿಸುತ್ತಿದ್ದಾಗಲೇ ಹಿಂದೆ ಕುಳಿತಿದ್ದ ವ್ಯಕ್ತಿಯ ಜೊತೆಗಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಆತನ ಜೊತೆಗೆ ಕುಕ್ಕರ್ ಇದ್ದಿರುವುದು ಶಂಕೆಗೆ ಕಾರಣವಾಗಿದೆ. ಇಬ್ಬರು ಗಾಯಾಳುಗಳನ್ನು ಕಂಕನಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನಾಗುರಿಯಿಂದ ಆಟೋ ಹತ್ತಿದ್ದ ಪ್ರಯಾಣಿಕನ ಕೈಯಲ್ಲಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿಗೂ ಬೆಂಕಿ ತಗಲಿದೆ. ಆಟೋ ಒಳಗಡೆ ಸುಟ್ಟು ಹೋಗಿದೆ. ಹಿಂದಿನಿಂದ ಬೆಂಕಿ ಕಾಣಿಸಿದ್ದಾಗಿ ಆಟೋ ಚಾಲಕ ಹೇಳಿದ್ದಾನೆ. ಬೆಂಕಿ ಹೇಗೆ ಹತ್ತಿಕೊಂಡಿದೆ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ತಜ್ಞರು ಬಂದು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.






ಬ್ಲಾಸ್ಟ್ ಘಟನೆ ಸ್ಥಳದಲ್ಲಿದ್ದ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಾರೀ ಹೊಗೆ ಕಾಣಿಸಿಕೊಂಡಿದೆ, ಜನರು ಗಾಬರಿಗೊಂಡು ಸ್ಥಳದತ್ತ ಓಡಿದ್ದಾರೆ. ಬೆಂಕಿ ಹತ್ತಿಕೊಂಡು ಏನೋ ಸ್ಫೋಟ ಆದ ರೀತಿ ಕಂಡುಬಂದಿದೆ. ಆಟೋ ರಿಕ್ಷಾ ಒಳಗಡೆ ಹಳೆಯ ಕುಕ್ಕರ್ ಪತ್ತೆಯಾಗಿದೆ. ಹೇಗೆ ಸ್ಫೋಟ ಸಂಭವಿಸಿದೆ ಅನ್ನುವುದು ಇನ್ನೂ ದೃಢಪಟ್ಟಿಲ್ಲ. ಯಾವುದಾದ್ರೂ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದನೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿದ್ದರಿಂದ ಆತಂಕ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.
Autorickshaw minor explosion at Naguri in Mangalore, catches fire passenger suffers injury, driver escapes unhurt, police are now investigating the case.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm