ಬ್ರೇಕಿಂಗ್ ನ್ಯೂಸ್
19-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.19: ನಗರದ ಕಂಕನಾಡಿ ನಾಗುರಿ ಪೊಲೀಸ್ ಠಾಣೆ ಬಳಿಯಲ್ಲೇ ನಿಗೂಢ ಸ್ಫೋಟ ಆಗಿದೆ. ಆಟೋ ಚಲಿಸುತ್ತಿದ್ದಾಗಲೇ ಒಳಗಿನಿಂದ ಸ್ಫೋಟ ಆಗಿದ್ದು, ಆಟೋ ಚಾಲಕ ಮತ್ತು ಪ್ರಯಾಣಿಕ ಗಾಯಗೊಂಡಿದ್ದಾರೆ. ಬ್ಲಾಸ್ಟ್ ಯಾವ ರೀತಿಯದ್ದು, ಹೇಗೆ ಸಂಭವಿಸಿದೆ ಎನ್ನುವುದು ದೃಢಪಟ್ಟಿಲ್ಲ.
ಆಟೋ ನಾಗುರಿಯಿಂದ ಹೆದ್ದಾರಿಯಲ್ಲಿ ಪಂಪ್ವೆಲ್ ಕಡೆಗೆ ಚಲಿಸುತ್ತಿತ್ತು. ಸಂಜೆ 5.30ರ ವೇಳೆಗೆ ಘಟನೆ ಸಂಭವಿಸಿದ್ದು, ಆಟೋ ಚಲಿಸುತ್ತಿದ್ದಾಗಲೇ ಹಿಂದೆ ಕುಳಿತಿದ್ದ ವ್ಯಕ್ತಿಯ ಜೊತೆಗಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಆತನ ಜೊತೆಗೆ ಕುಕ್ಕರ್ ಇದ್ದಿರುವುದು ಶಂಕೆಗೆ ಕಾರಣವಾಗಿದೆ. ಇಬ್ಬರು ಗಾಯಾಳುಗಳನ್ನು ಕಂಕನಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ನಾಗುರಿಯಿಂದ ಆಟೋ ಹತ್ತಿದ್ದ ಪ್ರಯಾಣಿಕನ ಕೈಯಲ್ಲಿದ್ದ ಬಾಕ್ಸ್ ನಲ್ಲಿ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿದೆ. ಬ್ಯಾಗ್ ಹಿಡಿದುಕೊಂಡಿದ್ದ ವ್ಯಕ್ತಿಗೂ ಬೆಂಕಿ ತಗಲಿದೆ. ಆಟೋ ಒಳಗಡೆ ಸುಟ್ಟು ಹೋಗಿದೆ. ಹಿಂದಿನಿಂದ ಬೆಂಕಿ ಕಾಣಿಸಿದ್ದಾಗಿ ಆಟೋ ಚಾಲಕ ಹೇಳಿದ್ದಾನೆ. ಬೆಂಕಿ ಹೇಗೆ ಹತ್ತಿಕೊಂಡಿದೆ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ತಜ್ಞರು ಬಂದು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.






ಬ್ಲಾಸ್ಟ್ ಘಟನೆ ಸ್ಥಳದಲ್ಲಿದ್ದ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಾರೀ ಹೊಗೆ ಕಾಣಿಸಿಕೊಂಡಿದೆ, ಜನರು ಗಾಬರಿಗೊಂಡು ಸ್ಥಳದತ್ತ ಓಡಿದ್ದಾರೆ. ಬೆಂಕಿ ಹತ್ತಿಕೊಂಡು ಏನೋ ಸ್ಫೋಟ ಆದ ರೀತಿ ಕಂಡುಬಂದಿದೆ. ಆಟೋ ರಿಕ್ಷಾ ಒಳಗಡೆ ಹಳೆಯ ಕುಕ್ಕರ್ ಪತ್ತೆಯಾಗಿದೆ. ಹೇಗೆ ಸ್ಫೋಟ ಸಂಭವಿಸಿದೆ ಅನ್ನುವುದು ಇನ್ನೂ ದೃಢಪಟ್ಟಿಲ್ಲ. ಯಾವುದಾದ್ರೂ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದನೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿದ್ದರಿಂದ ಆತಂಕ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚನೆ ನೀಡಲಾಗಿದೆ.
Autorickshaw minor explosion at Naguri in Mangalore, catches fire passenger suffers injury, driver escapes unhurt, police are now investigating the case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am