ಬ್ರೇಕಿಂಗ್ ನ್ಯೂಸ್
13-10-20 07:35 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಕ್ಷಿಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಿಡಿಕಾರಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಅಭ್ಯರ್ಥಿಯಾದ ಕುಸುಮಾ ತನ್ನ ದಿವಂಗತ ಪತಿಯ ಹೆಸರಿನಲ್ಲಿ ಮತ ಯಾಚಿಸಬಾರದು ಎಂದು ಶೋಭಾ ಹೇಳಿರುವುದು ಅಕ್ಷಮ್ಯ. ಶೋಭಾ ಹೇಳಿಕೆ ಭಾರತೀಯ ಸಂಸ್ಕೃತಿಗೆ ತದ್ವಿರುದ್ಧವಾಗಿದೆ. ಸಪ್ತಪದಿ ತುಳಿದವರಿಗೆ ಮಾತ್ರ ಪತಿಯ ಮಹತ್ವ ಗೊತ್ತಿರುತ್ತದೆ ಎಂದು ಶೋಭಾ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದರು.

ತನ್ನ ಕ್ಷೇತ್ರದ, ಜಿಲ್ಲೆಯ, ರಾಜ್ಯದ ಸಮಸ್ಯೆ ಬಗ್ಗೆ ಸಂಸತ್ತಿನಲ್ಲಿ ಮಾತನಾಡದ ಶೋಭಾ ಕರಂದ್ಲಾಜೆ ಕೇವಲ ಭಾವನಾತ್ಮಕ ವಿಚಾರಗಳಿಗೆ ಮಾತ್ರ ಪ್ರತಿಕ್ರಿಯೆ ನೀಡುವ ಮೂಲಕ ರಾಜಕಾರಣ ಮಾಡುತ್ತಾರೆ. ಜಾತಿ ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದು ಯಾರಿಗೂ ಶೋಭೆಯಾಗದು ಎಂದು ಹೇಳಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಾರ್ಯವೈಖರಿ ಬಗ್ಗೆ ಮಿಥುನ್ ರೈ ನೀಡಿದ ಹೇಳಿಕೆಯನ್ನು ಬಿಜೆಪಿಗರು ತಪ್ಪಾಗಿ ಅರ್ಥೈಸಿದ್ದಾರೆ. ಮಿಥುನ್ ಯಾವತ್ತೂ ಜೋಗಿ ಸಮುದಾಯಕ್ಕೆ ಅವಮಾನ ಆಗುವಂಥ ಹೇಳಿಕೆಯನ್ನು ನೀಡಿಲ್ಲ. ಅವರು ನೀಡಿದ ಹೇಳಿಕೆಯನ್ನು ಮುಂದಿಟ್ಟು ಬಿಜೆಪಿಯವರು ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಶಕುಂತಲಾ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಭಾ ಕುಳಾಯಿ, ನಮಿತಾ ಡಿ ರಾವ್, ಶಶಿಕಲಾ ಪದ್ಮನಾಭ, ಮಂಜುಳಾ ನಾಯಕ್, ಶೋಭಾ ಕೇಶವ್, ಸುರೇಖಾ ಚಂದ್ರ ಇತರರು ಉಪಸ್ಥಿತರಿದ್ದರು.
Puttur former MLA Shakuntala Shetty taunts MP Shobha Karandlaje slamming what will women know the value of a husband when she's not married at a press meet held at congress office in Mangalore.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am