ಬ್ರೇಕಿಂಗ್ ನ್ಯೂಸ್
13-10-20 07:35 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಕ್ಷಿಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಿಡಿಕಾರಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಅಭ್ಯರ್ಥಿಯಾದ ಕುಸುಮಾ ತನ್ನ ದಿವಂಗತ ಪತಿಯ ಹೆಸರಿನಲ್ಲಿ ಮತ ಯಾಚಿಸಬಾರದು ಎಂದು ಶೋಭಾ ಹೇಳಿರುವುದು ಅಕ್ಷಮ್ಯ. ಶೋಭಾ ಹೇಳಿಕೆ ಭಾರತೀಯ ಸಂಸ್ಕೃತಿಗೆ ತದ್ವಿರುದ್ಧವಾಗಿದೆ. ಸಪ್ತಪದಿ ತುಳಿದವರಿಗೆ ಮಾತ್ರ ಪತಿಯ ಮಹತ್ವ ಗೊತ್ತಿರುತ್ತದೆ ಎಂದು ಶೋಭಾ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದರು.

ತನ್ನ ಕ್ಷೇತ್ರದ, ಜಿಲ್ಲೆಯ, ರಾಜ್ಯದ ಸಮಸ್ಯೆ ಬಗ್ಗೆ ಸಂಸತ್ತಿನಲ್ಲಿ ಮಾತನಾಡದ ಶೋಭಾ ಕರಂದ್ಲಾಜೆ ಕೇವಲ ಭಾವನಾತ್ಮಕ ವಿಚಾರಗಳಿಗೆ ಮಾತ್ರ ಪ್ರತಿಕ್ರಿಯೆ ನೀಡುವ ಮೂಲಕ ರಾಜಕಾರಣ ಮಾಡುತ್ತಾರೆ. ಜಾತಿ ಧರ್ಮದ ಹೆಸರಲ್ಲಿ ರಾಜಕೀಯ ಮಾಡೋದು ಯಾರಿಗೂ ಶೋಭೆಯಾಗದು ಎಂದು ಹೇಳಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಯ ಕಾರ್ಯವೈಖರಿ ಬಗ್ಗೆ ಮಿಥುನ್ ರೈ ನೀಡಿದ ಹೇಳಿಕೆಯನ್ನು ಬಿಜೆಪಿಗರು ತಪ್ಪಾಗಿ ಅರ್ಥೈಸಿದ್ದಾರೆ. ಮಿಥುನ್ ಯಾವತ್ತೂ ಜೋಗಿ ಸಮುದಾಯಕ್ಕೆ ಅವಮಾನ ಆಗುವಂಥ ಹೇಳಿಕೆಯನ್ನು ನೀಡಿಲ್ಲ. ಅವರು ನೀಡಿದ ಹೇಳಿಕೆಯನ್ನು ಮುಂದಿಟ್ಟು ಬಿಜೆಪಿಯವರು ರಾಜಕೀಯ ಮಾಡುತ್ತಿರುವುದು ಖಂಡನೀಯ ಎಂದು ಶಕುಂತಲಾ ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರತಿಭಾ ಕುಳಾಯಿ, ನಮಿತಾ ಡಿ ರಾವ್, ಶಶಿಕಲಾ ಪದ್ಮನಾಭ, ಮಂಜುಳಾ ನಾಯಕ್, ಶೋಭಾ ಕೇಶವ್, ಸುರೇಖಾ ಚಂದ್ರ ಇತರರು ಉಪಸ್ಥಿತರಿದ್ದರು.
Puttur former MLA Shakuntala Shetty taunts MP Shobha Karandlaje slamming what will women know the value of a husband when she's not married at a press meet held at congress office in Mangalore.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 02:39 pm
HK News Staffer
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm