ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.
ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
23-04-24 07:01 pm
HK News Desk
Parakala Prabhakar, Lok Sabha Election: ಆಡಳಿತ...
23-04-24 02:29 pm
ಉಚ್ಚಾಟನೆಗೆ ಹೆದರುವುದಿಲ್ಲ ; ಚುನಾವಣೆ ಸ್ಪರ್ಧೆ ಮಾಡ...
23-04-24 11:12 am
Pm Modi, Cm Siddaramaiah: ಕಾಂಗ್ರೆಸ್ ಅಧಿಕಾರಕ್ಕ...
23-04-24 11:07 am
Ticket Garland, CM Siddaramaiah: ಸಿದ್ದರಾಮಯ್ಯಗ...
23-04-24 10:11 am
22-04-24 10:37 pm
HK News Desk
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
23-04-24 03:18 pm
Mangalore Correspondent
Mangalore Heart Attack, Kolya: ಕೊಲ್ಯ ಮಲಯಾಳ ಕೋ...
23-04-24 02:18 pm
Mla Bharath Shetty, Mangalore, Siddaramaiah:...
23-04-24 01:26 pm
Congress Padmaraj Mangalore: ಬಂಟ್ವಾಳ ತಾಲೂಕಿನ...
23-04-24 12:48 pm
Dinesh Gundu Rao, Ullal, Mangalore: ರಾಜ್ಯಕ್ಕೆ...
23-04-24 12:06 pm
23-04-24 04:52 pm
HK News Desk
Gadag Murder, Arrest; ಗದಗ ನಾಲ್ವರ ಹತ್ಯೆ ಪ್ರಕರಣ...
22-04-24 10:14 pm
Ullal news, Mangalore: ಬೆಂಗಳೂರಿನ ಅನಾಥಾಶ್ರಮ ಹೆ...
19-04-24 10:25 pm
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm