ಬ್ರೇಕಿಂಗ್ ನ್ಯೂಸ್
21-11-22 09:39 pm Mangalore Correspondent ಕರಾವಳಿ
ಮಂಗಳೂರು, ನ.21 : 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಗೆ ಒಳಗಾಗಿರುವ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ. ಬಿಜೆಪಿ ಸರಕಾರದ ಹಿಂದು ವಿರೋಧಿ ನಡೆ ಮತ್ತು ಎಸ್ಡಿಪಿಐ ಜೊತೆಗಿನ ಅಕ್ರಮ ಸಂಬಂಧ ಇದರ ಫಲವೇ ಬಾಂಬ್ ಸ್ಫೋಟ. ಒಟ್ಟು ರಾಜ್ಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯದಿಂದ ಇಂಥ ಘಟನೆ ಆಗಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಟೀಕಿಸಿದ್ದಾರೆ.
ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆತಂಕವಾದ ಅಳಿಸಿ, ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷವು ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ. ಎಸ್ಡಿಪಿಐ ಜೊತೆಗೆ ಅನೈತಿಕ ಮೈತ್ರಿ ರಾಜ್ಯಾದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟುಬಿಡಲಿ. ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಬಾಂಬ್ ಬ್ಲಾಸ್ಟ್ ನಂತಹ ವಿಧ್ವಂಸಕ ಕೃತ್ಯವನ್ನು ಎಸಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
Autorickshaw blast in Mangalore, BJP government failure reason slams Hindu Maha Sabha Pavitran.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm