ಬ್ರೇಕಿಂಗ್ ನ್ಯೂಸ್
21-11-22 09:39 pm Mangalore Correspondent ಕರಾವಳಿ
ಮಂಗಳೂರು, ನ.21 : 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಗೆ ಒಳಗಾಗಿರುವ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ. ಬಿಜೆಪಿ ಸರಕಾರದ ಹಿಂದು ವಿರೋಧಿ ನಡೆ ಮತ್ತು ಎಸ್ಡಿಪಿಐ ಜೊತೆಗಿನ ಅಕ್ರಮ ಸಂಬಂಧ ಇದರ ಫಲವೇ ಬಾಂಬ್ ಸ್ಫೋಟ. ಒಟ್ಟು ರಾಜ್ಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯದಿಂದ ಇಂಥ ಘಟನೆ ಆಗಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಟೀಕಿಸಿದ್ದಾರೆ.
ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆತಂಕವಾದ ಅಳಿಸಿ, ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷವು ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ. ಎಸ್ಡಿಪಿಐ ಜೊತೆಗೆ ಅನೈತಿಕ ಮೈತ್ರಿ ರಾಜ್ಯಾದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟುಬಿಡಲಿ. ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಬಾಂಬ್ ಬ್ಲಾಸ್ಟ್ ನಂತಹ ವಿಧ್ವಂಸಕ ಕೃತ್ಯವನ್ನು ಎಸಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
Autorickshaw blast in Mangalore, BJP government failure reason slams Hindu Maha Sabha Pavitran.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am