ಕುಕ್ಕರ್ ಬಾಂಬ್ ಸ್ಫೋಟ ; ದುರಂತ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿಪಿ ಪ್ರವೀಣ್ ಸೂದ್ ಭೇಟಿ, ಅಧಿಕಾರಿಗಳ ಜೊತೆ ಸಭೆ 

23-11-22 12:24 pm       Mangalore Correspondent   ಕರಾವಳಿ

ಕುಕ್ಕರ್ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಎಲರ್ಟ್ ಆಗಿದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಂಗಳೂರಿಗೆ ಆಗಮಿಸಿದ್ದಾರೆ. 

ಮಂಗಳೂರು, ನ.23: ಕುಕ್ಕರ್ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಎಲರ್ಟ್ ಆಗಿದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಂಗಳೂರಿಗೆ ಆಗಮಿಸಿದ್ದಾರೆ. 

ಬಾಂಬ್ ಸ್ಫೋಟ ನಡೆದಿರುವ ಪಂಪ್ವೆಲ್ ಬಳಿಯ ನಾಗುರಿಗೆ ಭೇಟಿ ನೀಡಿದ ಸಚಿವರು, ದುರಂತಕ್ಕೆ ಸಾಕ್ಷಿಯಾದ ಆಟೋ ರಿಕ್ಷಾವನ್ನು ಪರಿಶೀಲನೆ ನಡೆಸಿದ್ದಾರೆ. ದುರಂತದ ಬಗ್ಗೆ ಪೊಲೀಸರು ಮತ್ತು ಸ್ಥಳೀಯ ಶಾಸಕರಿಂದ ಮಾಹಿತಿ ಪಡೆದರು. ಆನಂತರ, ಸ್ಫೋಟ ಘಟನೆಯಲ್ಲಿ ಗಾಯಗೊಂಡಿರುವ ಉಗ್ರ ಮೊಹಮ್ಮದ್ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರನ್ನು ಕಂಕನಾಡಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. 

ದುರಂತ ಘಟನೆ ಬಗ್ಗೆ ಮಂಗಳೂರಿನಲ್ಲಿ ಗೃಹ ಸಚಿವರು ಪೊಲೀಸ್ ಮತ್ತು ಗುಪ್ತಚರ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಗುಪ್ತಚರ ವೈಫಲ್ಯ, ಪೊಲೀಸ್ ತನಿಖೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ಕಳೆದ ಎರಡು ದಿನಗಳಿಂದ ಆಗಿರುವ ಬೆಳವಣಿಗೆ ಮತ್ತು ತನಿಖಾ ಹಂತಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.‌

State home minister Araga Jnanendra, DGP Praveen Sood and others on Wednesday November 23, visited the spot where a Autorickshaw cooker bomb exploded in an auto rickshaw. It may be recalled, the cooker bomb had exploded in an auto rickshaw at Naguri on November 19. Two people, auto driver Purushottam Poojary and suspected terrorist Mohammad Shariq who was carrying the cooker bomb, were injured in the incident.