ಬ್ರೇಕಿಂಗ್ ನ್ಯೂಸ್
24-11-22 04:14 pm Mangalore Correspondent ಕರಾವಳಿ
ಮಂಗಳೂರು, ನ.24: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಮಂಗಳೂರಿಗೆ ತಲುಪಿದ ಕೂಡಲೇ ಮಣ್ಣಗುಡ್ಡ ಸ್ಥಳದ ಬಗ್ಗೆ ಎರಡು ಬಾರಿ ಲೊಕೇಶನ್ ಟ್ರೇಸ್ ಮಾಡಿದ್ದಾನೆ. ತನಿಖಾ ತಂಡ ಆತನ ಮೊಬೈಲನ್ನು ಚೆಕ್ ಮಾಡಿದಾಗ ಮಹತ್ವದ ಮಾಹಿತಿಗಳು ಹೊರಬಂದಿದ್ದು, ಆತನ ಟಾರ್ಗೆಟ್ ಮಣ್ಣಗುಡ್ಡ ಆಗಿತ್ತೇ ಎನ್ನುವ ಸಂಶಯ ಮೂಡಿದೆ.
ಯಾಕಂದ್ರೆ, ನ.19ರಂದು ಮಣ್ಣಗುಡ್ಡದಲ್ಲಿ ಕನ್ನಡ ಹಬ್ಬ ಅನ್ನುವ ಶಾಲಾ ಮಕ್ಕಳ ಕಾರ್ಯಕ್ರಮ ಇತ್ತು. ಜೊತೆಗೆ, ಅದೇ ಪಕ್ಕದಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮವೂ ನಡೆದಿತ್ತು. ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜಿಲ್ಲೆಯ ವಿವಿಧೆಡೆಯಿಂದ ಮಕ್ಕಳು ಸೇರಿದ್ದರು. ಕನ್ನಡ ಶಾಲೆಗಳ ಮಕ್ಕಳನ್ನು ಒಟ್ಟು ಸೇರಿಸಿ ಆರೆಸ್ಸೆಸ್ ಅಧೀನದಲ್ಲಿರುವ ಮಣ್ಣಗುಡ್ಡದ ಸಂಘನಿಕೇತನದಲ್ಲಿ ಕಾರ್ಯಕ್ರಮ ಮಾಡಲಾಗಿತ್ತು. ಮಣ್ಣಗುಡ್ಡ ಪಕ್ಕದಲ್ಲೇ ಇರುವ ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮ ಏರ್ಪಾಡಾಗಿತ್ತು. ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಹೆಸರಲ್ಲಿ 20 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲಾಗಿತ್ತು.

ಉಗ್ರ ಶಾರೀಕ್ ಮಂಗಳೂರಿಗೆ ಬರುವುದಕ್ಕೂ ಮುನ್ನ ವಿವಿಧ ಕಡೆಯ ಎಂಟತ್ತು ಬಾರಿ ಲೊಕೇಶನ್ ಹುಡುಕಾಟ ನಡೆಸಿದ್ದ. ಎಷ್ಟು ಹೊತ್ತಿಗೆ ಈ ಸ್ಥಳಗಳಿಗೆ ತಲುಪಬಹುದು ಅನ್ನುವ ಬಗ್ಗೆ ಲೆಕ್ಕ ಹಾಕಿದ್ದ. ಆದರೆ ಮೈಸೂರಿನಿಂದ ಮಡಿಕೇರಿ, ಪುತ್ತೂರು ಆಗಿ ಮಂಗಳೂರಿಗೆ ಬಸ್ ತಲುಪಿದಾಗಲೇ ಲೇಟ್ ಆಗಿದ್ದರಿಂದ ಪ್ಲಾನ್ ಕೈಕೊಟ್ಟಿತ್ತು ಎನ್ನಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನವೇ ತೆರಳಿದ್ದರು. ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿಯೂ ಸಂಜೆ ಹೊತ್ತಿಗೆ ಮಕ್ಕಳು ನಿರ್ಗಮಿಸಿದ್ದರು. ಆದರೆ ಆತನ ಗೂಗಲ್ ಸರ್ಚ್ ಹಿಸ್ಟರಿಯಲ್ಲಿ ಎರಡು ಬಾರಿ ಮಣ್ಣಗುಡ್ಡ- ಗಾಂಧಿನಗರ ಲೊಕೇಶನ್ ತೋರಿಸಿತ್ತು ಅನ್ನುವುದು ಶಾರೀಕ್ ಗುರಿ ಇದೇ ಜಾಗ ಆಗಿತ್ತಾ ಅನ್ನುವ ಶಂಕೆ ಮೂಡಿಸಿದೆ.
ಇವೆಲ್ಲ ಸಂದೇಹ, ಪ್ರಶ್ನೆಗಳಿಗೆ ಉತ್ತರವನ್ನು ಉಗ್ರ ಶಾರೀಕ್ ನೀಡಬೇಕಾಗಿದೆ. ಆದರೆ, ವೈದ್ಯರ ಮಾಹಿತಿ ಪ್ರಕಾರ ಸುಟ್ಟ ಗಾಯಗಳಿಂದ ಪಾರಾಗಬೇಕಿದ್ದರೆ ಕನಿಷ್ಠ 25 ದಿನಗಳು ಬೇಕಂತೆ. ಅಲ್ಲದೆ, ಬಾಂಬ್ ಸ್ಫೋಟ ಸಂದರ್ಭದಲ್ಲಿ ಬಿಸಿ ಹೊಗೆ ಬಾಯಿ ಒಳಗೆ ಹೋಗಿರುವುದರಿಂದ ಗಂಟಲು ಇನ್ಫೆಕ್ಷನ್ ಆಗಿದೆ. ಅದರಿಂದಾಗಿ ಸದ್ಯಕ್ಕೆ ಮಾತನಾಡುವ ಸ್ಥಿತಿಯಲ್ಲಿಲ್ಲ. ಒಂದು ತಿಂಗಳ ನಿರಂತರ ಚಿಕಿತ್ಸೆಯ ನಂತರವೇ ಆತ ಸ್ವಸ್ಥನಾದಲ್ಲಿ ಒಂದಷ್ಟು ಪ್ರಶ್ನೆಗಳಿಗೆ ಉತ್ತರ ನೀಡಬಹುದು ಅನ್ನುವ ಲೆಕ್ಕಾಚಾರ ಇದೆ. ಏನಿದ್ದರೂ ಮೆಡಿಕಲೀ ಫಿಟ್ ಎಂದು ವೈದ್ಯರು ಸರ್ಟಿಫಿಕೇಟ್ ನೀಡದ ಹೊರತು ತನಿಖಾಧಿಕಾರಿಗಳು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸದ್ಯಕ್ಕೆ ಶಾರೀಕ್ ಚಿಕಿತ್ಸೆಯನ್ನೇ ತನಿಖಾಧಿಕಾರಿಗಳು ಟಾರ್ಗೆಟ್ ಮಾಡಿದ್ದಾರೆ.
Autorickshaw bomb blast in Mangalore, Bomber Shariq location traced at Mangaladevi temple, did he plan for blast is the doubt police have got.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm