ಬ್ರೇಕಿಂಗ್ ನ್ಯೂಸ್
27-11-22 11:17 am Udupi Correspondent ಕರಾವಳಿ
ಉಡುಪಿ, ನ.27: ಸುರತ್ಕಲ್ ಟೋಲ್ ಗೇಟ್ ಹಣವನ್ನು ಹೆಜಮಾಡಿಯಲ್ಲಿ ವಸೂಲಿ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ರಘುಪತಿ ಭಟ್ ವಿರೋಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಭಟ್ ಸುರತ್ಕಲ್ ಟೋಲ್ ಗೇಟ್ ಮುಚ್ಚಿ, ಅಲ್ಲಿ ವಸೂಲಿ ಮಾಡುತ್ತಿದ್ದ ಶುಲ್ಕವನ್ನು ಹೆಜಮಾಡಿ ಟೋಲ್ ಶುಲ್ಕಕ್ಕೆ ಸೇರಿಸುವುದು ಸರಿಯಲ್ಲ. ಏಕೆಂದರೆ ಸುರತ್ಕಲ್ ಟೋಲ್ಗೇಟ್ಗೂ, ಹೆಜಮಾಡಿ ಟೋಲ್ಗೂ ಯಾವುದೇ ಸಂಬಂಧವಿಲ್ಲ. ಹೆಜಮಾಡಿಯ ಟೋಲ್ನ್ನು ನವಯುಗ ಕಂಪೆನಿ ಸಂಗ್ರಹಿಸುತ್ತಿದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಈಗ ಮೂರು ಕಡೆಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ. ಸುರತ್ಕಲ್ ಟೋಲ್ ಅನ್ನು ಬಂಟ್ವಾಳ ರಸ್ತೆಗೆ ಸಂಬಂಧಿಸಿದ ಕಂಪೆನಿ ಪಡೆಯುತ್ತಿದ್ದು, ನವಯುಗ ಅಲ್ಲಿ ಯಾವ ಕಾಮಗಾರಿಯನ್ನೂ ಮಾಡಿಲ್ಲ. ಈಗ ನವಯುಗ ಅಲ್ಲಿನ ಟೋಲ್ ಅನ್ನು ಉಡುಪಿಯ ಜನತೆಯಿಂದ ಪಡೆಯುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದರು.

ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಈ ನೀತಿಯಿಂದ ತೊಂದರೆಗೆ ಒಳಗಾಗುವುದು ಉಡುಪಿ ಜಿಲ್ಲೆಯ ಜನತೆ. ಅವರೀಗ ತಮ್ಮದಲ್ಲದ ತಪ್ಪಿಗೆ ಅಧಿಕ ಶುಲ್ಕ ಪಾವತಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ನಿರ್ಧಾರವನ್ನು ವಿರೋಧಿಸಿ ತಾನು ಕೇಂದ್ರ ಸರಕಾರಕ್ಕೆ, ನಮ್ಮ ಸಂಸದರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಿರ್ಧಾರವನ್ನು ರದ್ದು ಪಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
Udupi MLA Raghupathi Bhat Slams over merger of Surathkal toll to Hejamady, says wont tolerate it
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm