ಬ್ರೇಕಿಂಗ್ ನ್ಯೂಸ್
            
                        27-11-22 04:45 pm Mangalore Correspondent ಕರಾವಳಿ
            ಮಂಗಳೂರು, ನ.27: ಧರ್ಮಸ್ಥಳ ಟಾರ್ಗೆಟ್, ಅಲ್ಲೇ ಸನಿಹದಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಅನ್ನೋ ರಂಗು ರಂಗಾದ ಸುದ್ದಿ ಕೇಳಿ ಪೊಲೀಸರೇ ಬೆರಗಾಗಿದ್ದಾರೆ. ಅದೇನೂ ಇಲ್ಲಾರೀ, ಸುಮ್ನೆ ಅಂತ ಸ್ವತಃ ದಕ್ಷಿಣ ಕನ್ನಡ ಎಸ್ಪಿ ಸಾಹೇಬ್ರೆ ಹಲುಬಿದ್ದಾರೆ.
ಹೌದು.. ಪುಣ್ಯಕ್ಷೇತ್ರ ಧರ್ಮಸ್ಥಳ ಉಗ್ರರ ಟಾರ್ಗೆಟ್ ಎಂಬ ಟಿವಿ ಸುದ್ದಿ ಕೇಳಿದ ದಕ್ಷಿಣ ಕನ್ನಡ ಎಸ್ಪಿ ಋಷಿಕೇಶ ಸೋವವಾಣೆ ಸ್ಪಷ್ಟನೆ ಕೊಟ್ಟಿದ್ದಾರೆ. ಧರ್ಮಸ್ಥಳ ಠಾಣೆಯ ವ್ಯಾಪ್ತಿಯಲ್ಲಿ ಯಾವುದೇ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವ ಬಗ್ಗೆ ಯಾವುದೇ ಮಾಹಿತಿ ನಮಗಿಲ್ಲ. ಅದೇ ರೀತಿ ಧರ್ಮಸ್ಥಳ ಉಗ್ರರ ಟಾರ್ಗೆಟ್ ಅನ್ನೋದು ಕೂಡ ನಮಗೆ ತಿಳಿಯದ ಮಾಹಿತಿ. ನಮಗೆ ಯಾವುದೇ ಅಧಿಕೃತ ಏಜನ್ಸಿಗಳಿಂದ ಅಂತಹ ಸುದ್ದಿ ಬಂದಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.


ಕಕ್ಕಿಂಜೆ ಭಾಗದಲ್ಲಿ ಸ್ಯಾಟಲೈಟ್ ಫೋನ್ ರಿಂಗ್, ಬ್ಲಾಸ್ಟ್ ಆಗಿರುವ ಸದ್ದು ಕೇಳಿದೆ ಎಂಬ ವದಂತಿಗಳಿಗೆ ಪಟಾಕಿ ಕಾರಣ ಇದ್ದಿರಬಹುದು ಎಂದು ಎಸ್ಪಿ ಸೋನವಾಣೆ ಹೇಳಿದ್ದಾರೆ. ಆ ಭಾಗದಲ್ಲಿ ಕಾಡಾನೆ ಓಡಿಸಲು ಸ್ಥಳೀಯರು ಪಟಾಕಿ ಸಿಡಿಸುತ್ತಾರೆ. ಅದರಿಂದ ಹೊಗೆ ಎದ್ದಿರುವ ಸಾಧ್ಯತೆಯಿದೆ. ಅದನ್ನು ಬಾಂಬ್ ಸ್ಫೋಟದ ಟ್ರಯಲ್ ಎನ್ನುವ ರೀತಿ ಬಿಂಬಿಸಬೇಡಿ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎನ್ನುವ ಅಪರಿಚಿತ ಹೆಸರಿನಲ್ಲಿ ನಾವೇ ಬಾಂಬ್ ಸ್ಫೋಟಿಸಿದ್ದಾಗಿ ಕರಪತ್ರ ವೈರಲ್ ಆಗಿತ್ತು. ಅದರಲ್ಲಿ ಕದ್ರಿ ದೇವಸ್ಥಾನ ಟಾರ್ಗೆಟ್ ಇತ್ತು ಎಂಬುದಾಗಿ ಸುದ್ದಿ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದವು. ಆನಂತರ, ಸ್ಯಾಟಲೈಟ್ ಫೋನ್ ರಿಂಗ್ ಆಗಿರುವುದು ಮತ್ತು ಅದು ಉಗ್ರರ ಜಾಡು ಅನ್ನುವ ಸುದ್ದಿಗಳು ಹಬ್ಬಿದ್ದವು. ಉಡುಪಿ ಕೃಷ್ಣ ಮಠ, ಮಂದಾರ್ತಿ ದೇವಸ್ಥಾನ, ಆನಂತರ ಧರ್ಮಸ್ಥಳ ಟಾರ್ಗೆಟ್ ಅನ್ನುವ ಸುದ್ದಿಗಳೂ ಕೇಳಿಬಂದಿದ್ದವು. ಇದೀಗ ಇವೆಲ್ಲ ಸುದ್ದಿಗಳ ಹಿನ್ನೆಲೆಯಲ್ಲಿ ಜನರು ಗೊಂದಲಕ್ಕೆ ಒಳಗಾಗಬಾರದು ಅನ್ನುವ ದೃಷ್ಟಿಯಿಂದ ಎಸ್ಪಿ ಸೋನವಾಣೆ, ಧರ್ಮಸ್ಥಳದಲ್ಲಿ ಅಂತಹ ಯಾವುದೇ ಸಂಶಯಾಸ್ಪದ ನಡೆಗಳು ಕಂಡುಬಂದಿಲ್ಲ ಎಂದು ಹೇಳಿ ವದಂತಿಗಳಿಗೆ ತೆರೆ ಎಳೆದಿದ್ದಾರೆ.
            
            
            Mangalore Satellite phone signals and bomb blast trail at Dharmasthala, SP Says it was crackers to avoid elephants. No trail bomb blast was made nor satellite phone signals have been detected near Dharmasthala forest range clarifies SP.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm