ಬ್ರೇಕಿಂಗ್ ನ್ಯೂಸ್
14-10-20 12:57 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಸಾಂಪ್ರದಾಯಿಕ ಹುಲಿ ವೇಷಕ್ಕೆ ಅವಕಾಶ ನೀಡಬೇಕೆಂಬ ಒತ್ತಡಕ್ಕೆ ಜಿಲ್ಲಾಡಳಿತ ಕೊನೆಗೂ ಮಣಿದಿದೆ. ನವರಾತ್ರಿ ವೇಳೆ ಸಾಂಪ್ರದಾಯಿಕ ಹುಲಿ ವೇಷಕ್ಕೆ ಒಪ್ಪಿಗೆ ನೀಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಧಾರ್ಮಿಕ ಪರಿಷತ್ ಸಭೆಯಲ್ಲಿ ಹುಲಿ ವೇಷಕ್ಕೆ ಷರತ್ತು ಬದ್ಧ ಅನುಮತಿ ನೀಡಲಾಗಿದೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಧಾರ್ಮಿಕ ಪರಿಷತ್ ಸದಸ್ಯರ ಸಭೆಯಲ್ಲಿ ಈ ಬಾರಿ ಹುಲಿ ವೇಷಕ್ಕೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿತ್ತು. ಆದರೆ ಸಾರ್ವಜನಿಕರು ಮತ್ತು ನವರಾತ್ರಿ ಉತ್ಸವ ಸಮಿತಿಗಳು ಈ ಬಗ್ಗೆ ಪ್ರಬಲ ಒತ್ತಾಯ ಮುಂದಿಟ್ಟಿದ್ದರಿಂದ ಕೆಲವು ಷರತ್ತುಗಳೊಂದಿಗೆ ಒಪ್ಪಿಗೆ ನೀಡಲಾಗಿದೆ.
ದೇವಸ್ಥಾನದ ಆವರಣದಲ್ಲಿ ಮಾತ್ರ ಗರಿಷ್ಠ 10 ಹುಲಿ ವೇಷಧಾರಿಗಳಿಗೆ ನಿಗದಿತ ಕಾಲಮಿತಿಯೊಳಗೆ ಹರಕೆ ಅರ್ಪಿಸಲು ಅನುಮತಿ ನೀಡಲಾಗಿದೆ. ಆದರೆ, ಈ ರೀತಿ ಹರಕೆ ಸಲ್ಲಿಸುವಾಗ ಎಲ್ಲರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಸುವಂತೆ ನೋಡಿಕೊಳ್ಳಬೇಕು. ಈ ನಿಯಮ ಪಾಲನೆ ಮಾಡುವುದು ಸಂಬಂಧಪಟ್ಟ ದೇವಸ್ಥಾನ ಆಡಳಿತದ ಜವಾಬ್ದಾರಿ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಈ ವೇಳೆ, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಮತ್ತು ಅಹಿತಕರ ಘಟನೆ ಸಂಭವಿಸಿದಲ್ಲಿ ಸಂಬಂಧಪಟ್ಟ ದೇವಳದ ಆಡಳಿತ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಣಯಿಸಲಾಗಿದೆ. ಅಲ್ಲದೆ, ಹುಲಿ ವೇಷಧಾರಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶನ ನೀಡುವುದನ್ನು ನಿರ್ಬಂಧಿಸಲಾಗಿದೆ. ಸುಡುಮದ್ದು , ಪಟಾಕಿ ಸಿಡಿಸುವುದನ್ನೂ ಸಂಪೂರ್ಣ ನಿಷೇಧಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
Mangalore DC Dr K V Rajendra allowed permission for troupes to perform Pili Vesha within temple premises during Dasara with orders to be followed.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm