ಬ್ರೇಕಿಂಗ್ ನ್ಯೂಸ್
            
                        28-11-22 06:39 pm Udupi Correspondent ಕರಾವಳಿ
            ಉಡುಪಿ, ನ.28 : ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ವೇಳೆ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ `ಟೆರರಿಸ್ಟ್’ ಎಂಬ ಪದ ಬಳಸಿ ನಿಂದನೆ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ತರಗತಿಯಲ್ಲಿ ವಿದ್ಯಾರ್ಥಿ ಮತ್ತು ಪ್ರೊಫೆಸರ್ ವಾಗ್ವಾದ ನಡೆಸುತ್ತಿರುವ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದೇ ತಿಂಗಳ ನವೆಂಬರ್ 26ರಂದು ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಟೆರರಿಸ್ಟ್ ಗಳು ಎಂಬ ಅರ್ಥದಲ್ಲಿ ಪ್ರೊಫೆಸರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

ಪ್ರೊಫೆಸರ್ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ, ಇಡೀ ಮುಸ್ಲಿಂ ಕಮ್ಯುನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದಿದ್ದಾನೆ. ಬಳಿಕ ಪ್ರಾಧ್ಯಾಪಕರು ಸಮಜಾಯಿಷಿ ಹೇಳಿದ್ದು ವಿದ್ಯಾರ್ಥಿ ತನ್ನ ಮಗನಂತೆ ಎಂದಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ `ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ, ಸ್ಥಳದಲ್ಲೇ ಕ್ಷಮೆ ಕೋರಿದ್ದು ವಿಡಿಯೋದಲ್ಲಿದೆ.
ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಆಕ್ಷೇಪಿಸಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಮಾಹೆ ವಿಶ್ವವಿದ್ಯಾನಿಲಯದ ಆಡಳಿತ ಅಮಾನತುಗೊಳಿಸಿ ಆಂತರಿಕ ತನಿಖೆಗೆ ಆದೇಶಿಸಿದೆ. ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.
A Professor in a class room in India calling a Muslim student ‘terrorist’ - This is what it has been to be a minority in India! pic.twitter.com/EjE7uFbsSi
— Ashok Swain (@ashoswai) November 27, 2022
            
            
            In a shocking incident, a professor from a Reputed University was suspended after a video went viral on social media where a student is seen to be arguing with the professor for allegedly calling him a terrorist. The professor later apologised to the student and said that he did not seriously mean it and that he is like his kid.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm