ಬ್ರೇಕಿಂಗ್ ನ್ಯೂಸ್
28-11-22 06:39 pm Udupi Correspondent ಕರಾವಳಿ
ಉಡುಪಿ, ನ.28 : ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ವೇಳೆ ಮುಸ್ಲಿಂ ವಿದ್ಯಾರ್ಥಿಯೊಬ್ಬನಿಗೆ `ಟೆರರಿಸ್ಟ್’ ಎಂಬ ಪದ ಬಳಸಿ ನಿಂದನೆ ಮಾಡಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ತರಗತಿಯಲ್ಲಿ ವಿದ್ಯಾರ್ಥಿ ಮತ್ತು ಪ್ರೊಫೆಸರ್ ವಾಗ್ವಾದ ನಡೆಸುತ್ತಿರುವ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದೇ ತಿಂಗಳ ನವೆಂಬರ್ 26ರಂದು ಘಟನೆ ನಡೆದಿದ್ದು, ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಮುಸ್ಲಿಮರು ಟೆರರಿಸ್ಟ್ ಗಳು ಎಂಬ ಅರ್ಥದಲ್ಲಿ ಪ್ರೊಫೆಸರ್ ಹೇಳಿದ್ದು, ವಿವಾದಕ್ಕೆ ಕಾರಣವಾಗಿದೆ.

ಪ್ರೊಫೆಸರ್ ಮಾತಿಗೆ ತರಗತಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿ, ಇಡೀ ಮುಸ್ಲಿಂ ಕಮ್ಯುನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯವಾಗಿ ಈ ರೀತಿ ಮಾತನಾಡಬೇಡಿ ಎಂದಿದ್ದಾನೆ. ಬಳಿಕ ಪ್ರಾಧ್ಯಾಪಕರು ಸಮಜಾಯಿಷಿ ಹೇಳಿದ್ದು ವಿದ್ಯಾರ್ಥಿ ತನ್ನ ಮಗನಂತೆ ಎಂದಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ `ನೀವು ನಿಮ್ಮ ಮಗನಿಗೆ ಹೀಗೆ ಮಾತನಾಡುತ್ತೀರಾ? ನೀವು ಅವನನ್ನು ಭಯೋತ್ಪಾದಕ ಎಂದು ಕರೆಯುತ್ತೀರಾ? ನೀವು ಎಷ್ಟು ಜನರ ಮುಂದೆ ನನ್ನನ್ನು ಹಾಗೆ ಕರೆಯುತ್ತೀರಿ? ಇದು ತರಗತಿ, ನೀವು ವೃತ್ತಿಪರರಾಗಿ ಕಲಿಸುತ್ತಿದ್ದೀರಿ, ಮುಸ್ಲಿಮನಾಗಿ ದಿನನಿತ್ಯ ಇದನ್ನು ಎದುರಿಸುವುದು ತಮಾಷೆಯಲ್ಲ. ನೀವು ನನ್ನನ್ನು ಹಾಗೆ ಕರೆಯಬೇಡಿ” ಎಂದು ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದಾನೆ. ವಿದ್ಯಾರ್ಥಿ ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ವಿಷಾದ ವ್ಯಕ್ತಪಡಿಸಿ, ಸ್ಥಳದಲ್ಲೇ ಕ್ಷಮೆ ಕೋರಿದ್ದು ವಿಡಿಯೋದಲ್ಲಿದೆ.
ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಎಂದು ವಿದ್ಯಾರ್ಥಿ ಆಕ್ಷೇಪಿಸಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಉಪನ್ಯಾಸಕನ ವಿರುದ್ಧ ಮಾಹೆ ವಿಶ್ವವಿದ್ಯಾನಿಲಯದ ಆಡಳಿತ ಅಮಾನತುಗೊಳಿಸಿ ಆಂತರಿಕ ತನಿಖೆಗೆ ಆದೇಶಿಸಿದೆ. ವಿದ್ಯಾರ್ಥಿಗೆ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.
A Professor in a class room in India calling a Muslim student ‘terrorist’ - This is what it has been to be a minority in India! pic.twitter.com/EjE7uFbsSi
— Ashok Swain (@ashoswai) November 27, 2022
In a shocking incident, a professor from a Reputed University was suspended after a video went viral on social media where a student is seen to be arguing with the professor for allegedly calling him a terrorist. The professor later apologised to the student and said that he did not seriously mean it and that he is like his kid.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am