ಬ್ರೇಕಿಂಗ್ ನ್ಯೂಸ್
            
                        29-11-22 10:57 pm Mangalore Correspondent ಕರಾವಳಿ
            ಮಂಗಳೂರು, ನ.29 : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿ ಹಂತಕ್ಕೆ ತಲುಪಿದೆ. ದ.ಕ. ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಕ್ಕೊಳಗಾಗಿ ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಫ್ಲೆಕ್ಸ್ ಗಳಲ್ಲ. ಅದು ಬಿಜೆಪಿ ಪಕ್ಷದ ಅತ್ಯಂತ ಕೆಟ್ಟ, ನಿರ್ಲಜ್ಜ, ಜನವಿರೋಧಿ ರಾಜಕಾರಣ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. 
ನ.29ರಂದು 33ನೇ ದಿನದ ಹಗಲು ರಾತ್ರಿ ಧರಣಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧ ಹೋರಾಟ ಐತಿಹಾಸಿಕ ಗೆಲುವನ್ನು ಸಾಧಿಸಿದೆ. ಈ ಹೋರಾಟದ ಜೊತೆಯಾಗಿ ನಿಂತ ದ.ಕ ಮತ್ತು ಉಡುಪಿ ಜಿಲ್ಲೆಯ ಜನಕ್ಕೂ ಹೋರಾಟದಿಂದ ಏನನ್ನೂ ಸಾಧಿಸಬಹುದೆಂಬ ಒಂದು ಹೊಸ ಭರವಸೆಯನ್ನು ತುಂಬಲು ಸಾಧ್ಯವಾಗಿದೆ. ತುಳುನಾಡಿನ ಮಣ್ಣಿನ ನಿಜವಾದ ಬೇಡಿಕೆ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಪ್ರಶ್ನೆಗಳು. ಶಿಕ್ಷಣ, ಆರೋಗ್ಯದಂತಹ ವ್ಯಾಪಾರೀಕರಣದ ವಿರುದ್ಧವೂ ಜಿಲ್ಲೆಯ ಜನ ಮುಂದಿನ ದಿನಗಳಲ್ಲಿ ಹೋರಾಟವನ್ನು ಕೈಗೊಳ್ಳಲು ಸಾಧ್ಯವಾಗಬೇಕು. ಈಗಾಗಲೇ ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿ ಸುಂಕ ವಸೂಲಿ ಮಾಡಲು ಮುಂದಾಗಿರುವುದರ ವಿರುದ್ಧ ಆಕ್ರೋಶಗಳು ಆ ಭಾಗದಲ್ಲೂ ದಾಖಲಾಗುತ್ತಿದೆ. ಹೆಜಮಾಡಿಯಲ್ಲೂ ಕೋಮುವಾದಿ, ನಿರ್ಲಜ್ಜ, ಪರ್ಸಂಟೇಜ್ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳನ್ನು ಎಳೆಎಳೆಯಾಗಿ ವಿವರಿಸಲಿದ್ದೇವೆ. ಡಿಸೆಂಬರ್ 2ರಂದು ಹೆಜಮಾಡಿ ಟೋಲ್ ಗೇಟ್ ಮುಂಭಾಗ ನಡೆಯುವ ಧರಣಿಯಲ್ಲಿ ನಾವು ಭಾಗವಹಿಸುವ ಮೂಲಕ ಅಲ್ಲಿನ ಹೋರಾಟಕ್ಕೆ ಸಹಮತವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.


ಮಾಜಿ ಶಾಸಕ ಮೊಯಿದ್ದಿನ್ ಬಾವಾ, ಸಿಐಟಿಯು ಕಾರ್ಮಿಕ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಬೀಡಿ ಕಾರ್ಮಿಕ ಮುಖಂಡರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಪದ್ಮಾವತಿ ಶೆಟ್ಟಿ, ಬಾಬು ಪಿಲಾರ್, ಸದಾಶಿವ ದಾಸ್, ಹೋರಾಟ ಸಮಿತಿ ಮುಖಂಡರಾದ ರಾಘವೇಂದ್ರ ರಾವ್ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಮೇಯರ್ ಪುರುಷೋತ್ತಮ ಚಿತ್ರಾಪುರ, ಮುಹಮ್ಮದ್ ಕುಂಜತ್ತಬೈಲ್, ಮಾಜಿ ಮೇಯರ್ ಬಶೀರ್ ಬೈಕಂಪಾಡಿ, ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮೂಸಬ್ಬ ಪಕ್ಷಿಕೆರೆ, ಮಾಜಿ ಕಾರ್ಪೊರೇಟರ್ ಜಯಂತಿ ಬಿ ಶೆಟ್ಟಿ, ಕಾಂಗ್ರೇಸ್ ಮುಖಂಡರಾದ ಸಾಹುಲ್ ಹಮೀದ್ , ಪಾರಡೈಸ್ ಯೂತ್ ಕ್ಲಬ್ ನ ಅಬೂಬಕ್ಕರ್, ಉಸ್ಮಾನ್, ಝಾಕಿರ್, ಡಿವೈಎಫ್ಐ ಮುಖಂಡರಾದ ಮಾಧುರಿ ಬೋಳಾರ, ಪ್ರಮೀಳಾ ಶಕ್ತಿನಗರ, ವಿಲ್ಲಿ ವಿಲ್ಸನ್ ಮುಂತಾದವರು ಉಪಸ್ಥಿತರಿದ್ದರು.
            
            
            Surathkal toll protest, Muneer Katipalla Slams BJP says party has reached graveyard.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm