ಬ್ರೇಕಿಂಗ್ ನ್ಯೂಸ್
30-11-22 09:54 pm Mangalore Correspondent ಕರಾವಳಿ
ಮಂಗಳೂರು, ನ.30: ಮುಸ್ಲಿಂ ಸಮುದಾಯಕ್ಕೆ ಪ್ರತ್ಯೇಕ ವಿದ್ಯಾಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಟ್ಟು ಅವುಗಳಿಗೆ ಅನುದಾನ ಒದಗಿಸಲು ಮುಂದಾಗುವ ಮೂಲಕ ಬಿ.ಜೆ.ಪಿ. ತನ್ನ ಅಸಲಿ ಮುಖವನ್ನು ಬಯಲು ಮಾಡಿಕೊಂಡಿದೆ ಎಂದು ಹಿಂದು ಮಹಾಸಭಾದ ಕರ್ನಾಟಕ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಲೇವಡಿ ಮಾಡಿದ್ದಾರೆ.
ರಾಜ್ಯದ ಬಿಜೆಪಿ ಸರಕಾರ ಮುಸ್ಲಿಂ ವಿದ್ಯಾರ್ಥಿಗಳಿಗಾಗಿಯೇ ವಿದ್ಯಾಸಂಸ್ಥೆ ತೆರೆಯಲು ಮುಂದಾಗಿರುವಾಗ ಹಿಂದೂಗಳಿಗೆಂದೇ ಯಾಕೆ ಪ್ರತ್ಯೇಕ ವಿದ್ಯಾಸಂಸ್ಥೆ ತೆರೆಯಬಾರದು ಎಂದು ಪವಿತ್ರನ್ ಪ್ರಶ್ನೆ ಮಾಡಿದ್ದಾರೆ. ಈ ದೇಶದಲ್ಲಿ ಹಿಂದುಗಳಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ. ಹಿಂದುಗಳ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಹಿಂದುಗಳ ಶಿಕ್ಷಣ ಸಂಸ್ಥೆ ತೆರೆಯುವ ಯಾವುದೇ ಗೋಜಿಗೆ ಹೋಗಿಲ್ಲ. ಹಿಂದೆ ಇದ್ದ ಗುರುಕುಲ ಪದ್ಧತಿ ಪ್ರಕಾರದ ಶಿಕ್ಷಣಕ್ಕೆ ಇವರು ಅನುಮತಿ ಕೊಡಲ್ಲ. ಆದರೆ ಮುಸ್ಲಿಮರಿಗೆ ಪ್ರತ್ಯೇಕ ಶಿಕ್ಷಣ ಸಂಸ್ಥೆ ತೆರೆಯಲು ಅನುದಾನ ಕೊಡುತ್ತದೆ. ರಾಜ್ಯದಲ್ಲಿ ಪ್ರತಿ ಶಿಕ್ಷಣ ಸಂಸ್ಥೆಗೆ ತಲಾ ಎರಡೂವರೆ ಕೋಟಿ ಅಂದರೆ ಹತ್ತಯ ಸಂಸ್ಥೆಗಳಿಗೆ ಸುಮಾರು 30 ಕೋಟಿ ರೂ. ಅನುದಾನ ಕೊಡಲು ಮುಂದಾಗಿದೆ. ಇದನ್ನು ಖಂಡಿಸುತ್ತೇನೆ. ಬಿಜೆಪಿ ಚುನಾವಣೆ ಕಾಲದಲ್ಲಿ ಮುಸ್ಲಿಮರ ಓಲೈಕೆಗೆ ತೊಡಗಿರುವುದನ್ನು ತೋರಿಸಿದೆ ಎಂದಿದ್ದಾರೆ.

ಈ ರೀತಿ ಮಾಡಿದರೆ ಹಿಜಾಬ್ ವಿರುದ್ಧ ಮಾಡಿದ ಹೋರಾಟಕ್ಕೆ ಏನು ಬೆಲೆ ಬಂದಂತಾಯಿತು, ಇದು ಹಿಂದೂ ವಿರೋಧಿ ನೀತಿಯಲ್ಲವೇ, ಈ ಕೆಲಸವನ್ನು ಕಾಂಗ್ರೆಸ್ ಅಥವಾ ಬೇರೆ ಯಾವುದೇ ಪಕ್ಷದವರು ಮಾಡಿದ್ದರೆ ಬಿ.ಜೆ.ಪಿ. ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತಿರಲಿಲ್ಲವೇ ಎಂದು ಸರಣಿ ಪ್ರಶ್ನೆಗಳನ್ನು ಪವಿತ್ರನ್ ಕೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ರಾಜ್ಯಾಧ್ಯಕ್ಷ ಪವಿತ್ರನ್, ಇಂತಹ ಬೇಜವಾಬ್ದಾರಿ ನಿಲುವನ್ನು ತೋರಿಸುತ್ತಿರುವ ಬಿಜೆಪಿ ಬೋಗಸ್ ಜನರ ಪಕ್ಷವಾಗಿದೆ ಎನ್ನುವುದನ್ನು ತೋರಿಸಿದೆ. ಹಿಂದೆ ಭ್ರಷ್ಟ ಜನರ ಪಕ್ಷವಾಗಿತ್ತು. ಈಗ ಬೋಗಸ್ ಜನರ ಪಕ್ಷವಾಗಿದೆ ಎಂದು ಜರೆದಿದ್ದಾರೆ.
The BHARATIYA Janata Party (BJP) has decided to open separate educational institutions for the Muslim community and provide them with grants. Hindu Mahasabha's Karnataka state president Rajesh Pavithran said the party has exposed its true face.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm