ಬ್ರೇಕಿಂಗ್ ನ್ಯೂಸ್
01-12-22 04:58 pm Mangalore Correspondent ಕರಾವಳಿ
ಮಂಗಳೂರು, ಡಿ.1: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಸುಟ್ಟ ಗಾಯಗಳಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡಿದ್ದು, ವೈದ್ಯರ ಸೂಚನೆಯಂತೆ ಪೊಲೀಸರು ಆತನನ್ನು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಒಂದಷ್ಟು ಪ್ರಶ್ನೆಗಳನ್ನು ಕೇಳಿ, ಉತ್ತರಗಳನ್ನು ಪಡೆದುಕೊಂಡಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ಶಾರೀಕ್ ಸಕಾರಾತ್ಮಕವಾಗಿಯೇ ಉತ್ತರ ನೀಡಿದ್ದಾನೆ.
ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದು, ಸುಟ್ಟ ಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಒಂದಷ್ಟು ಚೇತರಿಕೆ ಕಂಡಿರುವುದರಿಂದ ಆರೋಪಿಯನ್ನು ವಿಚಾರಣೆ ನಡೆಸಲು ವೈದ್ಯರು ಅನುಮತಿ ನೀಡಿದ್ದಾರೆ. ಹಾಗಾಗಿ ಕೆಲವೊಂದಷ್ಟು ಮಾಹಿತಿಗಳನ್ನು ಸಂಗ್ರಹ ಮಾಡಿದ್ದಾರೆ. ಸದ್ಯಕ್ಕೆ ಡಿಜಿಪಿ ಸೂಚನೆಯಂತೆ, ದೇಶದ್ರೋಹ ಕಾಯ್ದೆಯಡಿ ದಾಖಲಾಗಿರುವುದರಿಂದ ಪ್ರಕರಣವನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿದೆ. ಮುಂದಿನ ತನಿಖೆಯನ್ನು ಎನ್ಐಎ ಏಜನ್ಸಿಯವರೇ ಮಾಡಲಿದ್ದಾರೆ. ಅವರಿಗೆ ಬೇಕಾದ ಪೊಲೀಸ್ ಸಿಬಂದಿ ನೆರವನ್ನು ನಾವು ನೀಡುತ್ತೇವೆ ಎಂದು ಹೇಳಿದ್ದಾರೆ.
ಈ ನಡುವೆ, ಎನ್ಐಎ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ, ಪ್ರಕರಣದ ಬೆಳವಣಿಗೆ ಕುರಿತು ತನಿಖಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ, ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರು ಕೂಡ ಸುಟ್ಟ ಗಾಯಗಳಿಂದ ಚೇತರಿಕೆ ಕಂಡಿದ್ದು, ಐಸಿಯು ಘಟಕದಿಂದ ಬೇರೆ ಸಾಮಾನ್ಯ ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಸುಟ್ಟ ಗಾಯ ಆಗಿರುವುದರಿಂದ ಪ್ರತ್ಯೇಕವಾಗಿರಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಶಾರೀಕ್ ಗೆ ಇನ್ನೆಷ್ಟು ದಿನ ಚಿಕಿತ್ಸೆ ಬೇಕಾಗಬಹುದು ಎಂಬ ಪ್ರಶ್ನೆಗೆ, ಅದು ಹೇಳಕ್ಕೆ ಬರೋದಿಲ್ಲ, ವೈದ್ಯರು ಹೇಳಬೇಕಷ್ಟೆ. 40 ಶೇ. ದೇಹದ ಭಾಗಗಳು ಸುಟ್ಟು ಹೋಗಿರುವುದರಿಂದ ಒಳಭಾಗದಲ್ಲಿ ಕಂಡಿಶನ್ ಹೇಳಕ್ಕಾಗಲ್ಲ. ಸದ್ಯಕ್ಕೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಿದರು. ನ.19ರಂದು ಮಂಗಳೂರಿನ ನಾಗುರಿಯಲ್ಲಿ ಆಟೋದಲ್ಲಿ ಚಲಿಸುತ್ತಿದ್ದಾಗಲೇ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಆಟೋ ಚಾಲಕ ಮತ್ತು ಅದರಲ್ಲಿದ್ದ ಪ್ರಯಾಣಿಕ ಗಾಯಗೊಂಡಿದ್ದ. ಬಳಿಕ ನಡೆದ ತನಿಖೆಯಲ್ಲಿ ಪ್ರಯಾಣಿಕನಾಗಿ ಇದ್ದಿದ್ದು ಮೊಹಮ್ಮದ್ ಶಾರೀಕ್ ಅನ್ನುವುದು ತಿಳಿದುಬಂದಿತ್ತು.
Mangalore bomb blast accused sharik health improved investigation begun.
23-04-24 07:50 pm
HK News Desk
Raichur accident: ರಾಯಚೂರು ; ಹನುಮ ಪೂಜೆಗಾಗಿ ನದಿ...
23-04-24 07:01 pm
Parakala Prabhakar, Lok Sabha Election: ಆಡಳಿತ...
23-04-24 02:29 pm
ಉಚ್ಚಾಟನೆಗೆ ಹೆದರುವುದಿಲ್ಲ ; ಚುನಾವಣೆ ಸ್ಪರ್ಧೆ ಮಾಡ...
23-04-24 11:12 am
Pm Modi, Cm Siddaramaiah: ಕಾಂಗ್ರೆಸ್ ಅಧಿಕಾರಕ್ಕ...
23-04-24 11:07 am
22-04-24 10:37 pm
HK News Desk
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
23-04-24 03:18 pm
Mangalore Correspondent
Mangalore Heart Attack, Kolya: ಕೊಲ್ಯ ಮಲಯಾಳ ಕೋ...
23-04-24 02:18 pm
Mla Bharath Shetty, Mangalore, Siddaramaiah:...
23-04-24 01:26 pm
Congress Padmaraj Mangalore: ಬಂಟ್ವಾಳ ತಾಲೂಕಿನ...
23-04-24 12:48 pm
Dinesh Gundu Rao, Ullal, Mangalore: ರಾಜ್ಯಕ್ಕೆ...
23-04-24 12:06 pm
23-04-24 04:52 pm
HK News Desk
Gadag Murder, Arrest; ಗದಗ ನಾಲ್ವರ ಹತ್ಯೆ ಪ್ರಕರಣ...
22-04-24 10:14 pm
Ullal news, Mangalore: ಬೆಂಗಳೂರಿನ ಅನಾಥಾಶ್ರಮ ಹೆ...
19-04-24 10:25 pm
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm