ಬ್ರೇಕಿಂಗ್ ನ್ಯೂಸ್
01-12-22 04:58 pm Mangalore Correspondent ಕರಾವಳಿ
ಮಂಗಳೂರು, ಡಿ.1: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಸುಟ್ಟ ಗಾಯಗಳಿಂದ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡಿದ್ದು, ವೈದ್ಯರ ಸೂಚನೆಯಂತೆ ಪೊಲೀಸರು ಆತನನ್ನು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಒಂದಷ್ಟು ಪ್ರಶ್ನೆಗಳನ್ನು ಕೇಳಿ, ಉತ್ತರಗಳನ್ನು ಪಡೆದುಕೊಂಡಿದ್ದಾರೆ. ಪೊಲೀಸರ ಪ್ರಶ್ನೆಗಳಿಗೆ ಶಾರೀಕ್ ಸಕಾರಾತ್ಮಕವಾಗಿಯೇ ಉತ್ತರ ನೀಡಿದ್ದಾನೆ.
ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದು, ಸುಟ್ಟ ಗಾಯಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಒಂದಷ್ಟು ಚೇತರಿಕೆ ಕಂಡಿರುವುದರಿಂದ ಆರೋಪಿಯನ್ನು ವಿಚಾರಣೆ ನಡೆಸಲು ವೈದ್ಯರು ಅನುಮತಿ ನೀಡಿದ್ದಾರೆ. ಹಾಗಾಗಿ ಕೆಲವೊಂದಷ್ಟು ಮಾಹಿತಿಗಳನ್ನು ಸಂಗ್ರಹ ಮಾಡಿದ್ದಾರೆ. ಸದ್ಯಕ್ಕೆ ಡಿಜಿಪಿ ಸೂಚನೆಯಂತೆ, ದೇಶದ್ರೋಹ ಕಾಯ್ದೆಯಡಿ ದಾಖಲಾಗಿರುವುದರಿಂದ ಪ್ರಕರಣವನ್ನು ಎನ್ಐಎಗೆ ಹಸ್ತಾಂತರ ಮಾಡಲಾಗಿದೆ. ಮುಂದಿನ ತನಿಖೆಯನ್ನು ಎನ್ಐಎ ಏಜನ್ಸಿಯವರೇ ಮಾಡಲಿದ್ದಾರೆ. ಅವರಿಗೆ ಬೇಕಾದ ಪೊಲೀಸ್ ಸಿಬಂದಿ ನೆರವನ್ನು ನಾವು ನೀಡುತ್ತೇವೆ ಎಂದು ಹೇಳಿದ್ದಾರೆ.
ಈ ನಡುವೆ, ಎನ್ಐಎ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ, ಪ್ರಕರಣದ ಬೆಳವಣಿಗೆ ಕುರಿತು ತನಿಖಾ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ, ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರು ಕೂಡ ಸುಟ್ಟ ಗಾಯಗಳಿಂದ ಚೇತರಿಕೆ ಕಂಡಿದ್ದು, ಐಸಿಯು ಘಟಕದಿಂದ ಬೇರೆ ಸಾಮಾನ್ಯ ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಸುಟ್ಟ ಗಾಯ ಆಗಿರುವುದರಿಂದ ಪ್ರತ್ಯೇಕವಾಗಿರಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಶಾರೀಕ್ ಗೆ ಇನ್ನೆಷ್ಟು ದಿನ ಚಿಕಿತ್ಸೆ ಬೇಕಾಗಬಹುದು ಎಂಬ ಪ್ರಶ್ನೆಗೆ, ಅದು ಹೇಳಕ್ಕೆ ಬರೋದಿಲ್ಲ, ವೈದ್ಯರು ಹೇಳಬೇಕಷ್ಟೆ. 40 ಶೇ. ದೇಹದ ಭಾಗಗಳು ಸುಟ್ಟು ಹೋಗಿರುವುದರಿಂದ ಒಳಭಾಗದಲ್ಲಿ ಕಂಡಿಶನ್ ಹೇಳಕ್ಕಾಗಲ್ಲ. ಸದ್ಯಕ್ಕೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಹೇಳಿದರು. ನ.19ರಂದು ಮಂಗಳೂರಿನ ನಾಗುರಿಯಲ್ಲಿ ಆಟೋದಲ್ಲಿ ಚಲಿಸುತ್ತಿದ್ದಾಗಲೇ ಕುಕ್ಕರ್ ಬಾಂಬ್ ಸ್ಫೋಟ ನಡೆದಿತ್ತು. ಆಟೋ ಚಾಲಕ ಮತ್ತು ಅದರಲ್ಲಿದ್ದ ಪ್ರಯಾಣಿಕ ಗಾಯಗೊಂಡಿದ್ದ. ಬಳಿಕ ನಡೆದ ತನಿಖೆಯಲ್ಲಿ ಪ್ರಯಾಣಿಕನಾಗಿ ಇದ್ದಿದ್ದು ಮೊಹಮ್ಮದ್ ಶಾರೀಕ್ ಅನ್ನುವುದು ತಿಳಿದುಬಂದಿತ್ತು.
Mangalore bomb blast accused sharik health improved investigation begun.
08-02-23 09:09 pm
HK News Desk
ರಾವಣ ರಾಕ್ಷಸ, ಬ್ರಾಹ್ಮಣ ಅಂತೀವಾ ? ಸಮುದಾಯ ಬಗ್ಗೆ ಹ...
08-02-23 06:22 pm
ನ್ಯಾಯಾಧೀಶರ ಬಗ್ಗೆ ಆರೋಪ ; ನ್ಯಾಯಾಂಗ ನಿಂದನೆಗೈದ ವಕ...
08-02-23 06:07 pm
ನಕಲಿ ಸೈಟ್ ತೋರಿಸಿ ಗ್ರಾಹಕರಿಗೆ ಮೋಸ ; ವಂಚಕ ಜಯಕುಮಾ...
07-02-23 09:53 pm
ಬಳ್ಳಾರಿಯಲ್ಲಿ ಬೀದಿನಾಯಿಗಳ ದಾಳಿಗೆ 30ಕ್ಕೂ ಹೆಚ್ಚು...
07-02-23 05:10 pm
08-02-23 11:06 pm
HK News Desk
ಟರ್ಕಿ, ಸಿರಿಯದಲ್ಲಿ ಭೂ ಪ್ರಳಯ ; ಮೃತರ ಸಂಖ್ಯೆ 11 ಸ...
08-02-23 09:18 pm
ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, ಬಸ್ – ಕಾರು...
08-02-23 08:09 pm
ಕರಗುತ್ತಿದೆ ಸಾವಿರಕ್ಕೂ ಹೆಚ್ಚು ಹಿಮ ಸರೋವರ ; ಭಾರತ,...
08-02-23 06:12 pm
ಮತ್ತೆ ಆರ್ಬಿಐ ರೆಪೋ ದರ ಹೆಚ್ಚಳ ; ಜನಸಾಮಾನ್ಯರ ಜೇಬಿ...
08-02-23 01:13 pm
08-02-23 10:43 pm
Mangalore Correspondent
ಒಂದೇ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾದ ಕೇರಳದ...
08-02-23 03:23 pm
ವಿಷಾಹಾರ ಪ್ರಕರಣ ; ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘ...
08-02-23 02:55 pm
ನೇಣು ಬಿಗಿದು ಸಾವಿಗೆ ಶರಣಾದ ಅತಿಥಿ ಉಪನ್ಯಾಸಕಿ ; ಕಾ...
08-02-23 01:04 pm
ಅಮಿತ್ ಷಾ ಪುತ್ತೂರಿಗೆ ಬಂದು ಕ್ಯಾಂಪ್ಕೋ ಖರೀದಿಸುತ್ತ...
07-02-23 10:44 pm
08-02-23 11:37 pm
Mangaluru Correspondent
ಮೊಮ್ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅಶ್ಲೀಲ ವ...
08-02-23 08:33 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ ; ಸುರತ್ಕಲ್ ಪರಿ...
07-02-23 08:46 pm
ಜುವೆಲ್ಲರಿ ಉದ್ಯೋಗಿಯ ಕತ್ತು ಸೀಳಿ ಹತ್ಯೆ ; ಹರಿತ ಆಯ...
06-02-23 03:20 pm
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm