ಬ್ರೇಕಿಂಗ್ ನ್ಯೂಸ್
01-12-22 09:05 pm Mangalore Correspondent ಕರಾವಳಿ
ಮಂಗಳೂರು, ಡಿ.1: ನಗರದ ಪಂಪ್ವೆಲ್ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪರಕೀಯ ಶಿವಾಜಿ ಪ್ರತಿಮೆ ಯಾಕೆ ಬೇಕು, ನಮ್ಮಲ್ಲಿ ಸಾಧನೆ ಮಾಡಿರುವ ಮಂದಿ ಅನೇಕರಿದ್ದಾರೆ. ಅಂಥವರ ಪ್ರತಿಮೆ ಸ್ಥಾಪನೆ ಮಾಡಬಹುದಲ್ಲವೇ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.
ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್ ನೀಡಿದ್ದ ಶಿವಾಜಿ ಪ್ರತಿಮೆಯ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ ವೃತ್ತದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಕಾರ್ಯಸೂಚಿಯನ್ನು ಕಳೆದ ಬಾರಿ ಅ.29ರಂದು ನಡೆದಿದ್ದ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.


ಈ ಬಾರಿಯ ಕೌನ್ಸಿಲ್ ಸಭೆಯಲ್ಲಿ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ ವಿಷಯ ಪ್ರಸ್ತಾಪಿಸಿ, ಪಂಪ್ವೆಲ್ನಲ್ಲಿ ಭಗವಾನ್ ಮಹಾವೀರರ ಕಲಶವಿದೆ. ಮಹಾವೀರ ವೃತ್ತ ಎಂದು ಹೆಸರು ಇದೆ. ಇನ್ನೊಂದೆಡೆ ಅಲ್ಲಿ ಮಹಾರಾಷ್ಟ್ರದವರು ನಮ್ಮ ಬಸ್ಗಳಿಗೆ ಮಸಿ ಬಳಿಯುತ್ತಿದ್ದಾರೆ. ಎಂಇಎಸ್ ಕನ್ನಡಿಗರಿಗೆ ವಿರೋಧ ನಿಲುವು ಹೊಂದಿದೆ. ಹಾಗಿರುವಾಗ ಮರಾಠ ರಾಜ ಶಿವಾಜಿ ಪ್ರತಿಮೆ ಇಲ್ಲಿ ಯಾಕೆ ಬೇಕು ಎಂದು ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಕಾರ್ಪೊರೇಟರುಗಳು, ನೀವು ಹಿಂದು ನಾಯಕರನ್ನು ಯಾವಾಗಲೂ ಆಕ್ಷೇಪಿಸುತ್ತೀರಿ. ಹಿಂದೂಗಳನ್ನು ಒಗ್ಗೂಡಿಸಿದ ಶಿವಾಜಿ ಪ್ರತಿಮೆ ಹಾಕಿದರೆ ತಪ್ಪೇನು? ಅವರನ್ನು ಮಹಾರಾಷ್ಟ್ರಕ್ಕೆ ಸೀಮಿತ ಮಾಡಬೇಡಿ ಎಂದು ಹೇಳಿದರು.
ಕಾಂಗ್ರೆಸ್ ಸದಸ್ಯ ನವೀನ್ ಡಿಸೋಜ ಜತೆ ಶಶಿಧರ ಹೆಗ್ಡೆ ದನಿಗೂಡಿಸಿ, ನಾವು ಹಿಂದು ವಿರೋಧಿಗಳಲ್ಲ. ಭಾವನಾತ್ಮಕ ವಿಷಯ ಬಿಟ್ಟು, ರಚನಾತ್ಮಕ ಅಭಿವೃದ್ಧಿ ಕೆಲಸಗಳನ್ನು ಮಾಡಿ. ನಗರಕ್ಕೆ ಶಿವಾಜಿ ಕೊಡುಗೆ ಏನು? ನಮ್ಮವರೇ ಆಗಿರುವ ಕಯ್ಯಾರ, ಕಾರ್ನಾಡ್, ಕೆ.ಎಸ್.ಹೆಗ್ಡೆ ಮತ್ತಿತರರ ಪ್ರತಿಮೆ ಮಾಡಬಹುದಲ್ಲ? ಸಾಧ್ಯವಾದರೆ ಇತಿಹಾಸ ಪುರುಷರಾದ ಕೋಟಿ ಚೆನ್ನಯರ ಪುತ್ಥಳಿ ನಿರ್ಮಿಸಿ ಎಂದು ಸವಾಲು ಹಾಕಿದರು. ನವೀನ್ ಡಿಸೋಜ ಕೂಡ ಕೋಟಿ ಚೆನ್ನಯ ಪ್ರತಿಮೆ ಸ್ಥಾಪನೆಗೆ ಒತ್ತಾಯ ಮಂಡಿಸಿದರು.

ಇದರಿಂದ ಬಿಜೆಪಿ ಆಡಳಿತಕ್ಕೆ ಪ್ರತ್ಯುತ್ತರ ನೀಡಲು ಸಾಧ್ಯವಾಗಲಿಲ್ಲ. ನಾಡಿನ ಸಾಧಕರ ಪ್ರತಿಮೆ ಸ್ಥಾಪಿಸುವಂತೆ ಕಾಂಗ್ರೆಸ್ ನೀಡಿದ ಸವಾಲನ್ನು ಸ್ವೀಕರಿಸಿದ ಬಿಜೆಪಿ ಸದಸ್ಯರು, ನಿಮ್ಮ ಆಕ್ಷೇಪವನ್ನು ದಾಖಲಿಸುತ್ತೇವೆ. ಶಿವಾಜಿ ಪ್ರತಿಮೆ ವಿಚಾರ ಕಳೆದ ಬಾರಿಯೇ ಅನುಮೋದನೆ ಆಗಿತ್ತು. ಆಗ ನೀವು ವಿರೋಧ ಮಾಡಿರಲಿಲ್ಲ ಎಂದು ಹೇಳಿದರು.
New controversy shivaji statue in Mangalore congress opposed in MCC meeting.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm