ಬ್ರೇಕಿಂಗ್ ನ್ಯೂಸ್
            
                        05-12-22 10:53 am Udupi Correspondent ಕರಾವಳಿ
            ಕುಂದಾಪುರ, ಡಿ.5: ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ದರವನ್ನೂ ಸೇರಿಸಿ ವಸೂಲಿ ಮಾಡುವ ಕ್ರಮಕ್ಕೆ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದ್ದರಿಂದ ಟೋಲ್ ದರ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಶಾಸಕರು, ಸಚಿವರು ಇದ್ದು ಉಡುಪಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದೆ. ಎರಡೂ ಟೋಲ್ ದರ ಒಟ್ಟಾಗಿ ಪಡೆಯುವ ಹೆದ್ದಾರಿ ಇಲಾಖೆಯ ನಿರ್ಧಾರವನ್ನು ವಿರೋಧಿಸಲಾಗಿದೆ. ವಿವಿಧ ಟೋಲ್ಗಳಿಗೆ ಹಂಚಿ ಹಾಕುವುದಕ್ಕೂ ವಿರೋಧ ಇದೆ. ರಸ್ತೆ ನಿರ್ಮಾಣ ಕುರಿತು ಒಟ್ಟು 400 ಕೋ.ರೂ. ಪಾವತಿಸಬೇಕಿದ್ದು ಈಗಾಗಲೇ 250 ಕೋ.ರೂ. ಟೋಲ್ ಮೂಲಕ ಸಂಗ್ರಹಿಸಿ ಪಾವತಿಸಲಾಗಿದೆ. ಇನ್ನುಳಿದ 150 ಕೋ.ರೂ.ಗಳನ್ನು ಮನ್ನಾ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ. ಆಡಳಿತ ಶಿಷ್ಟಾಚಾರದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯೇ ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯಬೇಕಾದ ಕಾರಣ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದು ಅಲ್ಲೇ ಸ್ಪಷ್ಟ ತೀರ್ಮಾನ ಆಗಲಿದೆ. ಸಾಸ್ತಾನ ಹಾಗೂ ಹೆಜಮಾಡಿ ಟೋಲ್ ಗೇಟ್ ಅಂತರವೂ ನಿಗದಿಗಿಂತ ಕಡಿಮೆ ಇದೆ ಎನ್ನುವುದನ್ನು ಚರ್ಚೆ ವೇಳೆ ಗಮನಕ್ಕೆ ತರಲಾಗಿದೆ ಎಂದರು.

ಪಕ್ಷ ಹೇಳಿದರೆ ಸ್ಪರ್ಧಿಸುತ್ತೇನೆ
ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಇದೆಯೇ ಎಂದಾಗ, ಜನರಿಂದ ಒತ್ತಡ ಬರುತ್ತಿದೆ. ಈಗ ಸಾಂವಿಧಾನಿಕ ಹುದ್ದೆಯಲ್ಲಿ ಇರುವುದರಿಂದ ಯಾವುದೇ ತೀರ್ಮಾನ ಮಾಡಿಲ್ಲ. ಪಕ್ಷ ಸೂಚಿಸಿದರೆ ಈ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ. ಯಾವ ಕ್ಷೇತ್ರ ಮೊದಲಾದವುಗಳ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಪಕ್ಷದಲ್ಲಿ ಈ ಕುರಿತಾದ ಬೆಳವಣಿಗೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಕೆಲಸ ಮಾಡುವ ಜನಪ್ರತಿನಿಧಿ ಬೇಕು ಎಂದು ಜನ ಬಯಸುತ್ತಿದ್ದಾರೆ. ಆದ್ದರಿಂದ ಯಾವುದಾದರೂ ಕ್ಷೇತ್ರದ ಶಾಸಕರ ಕೆಲಸ ಕಡಿಮೆ ಎಂದು ಜನರಿಗೆ ಹಾಗೂ ಪಕ್ಷಕ್ಕೆ ಅನಿಸಿದರೆ ಅಲ್ಲಿ ಸ್ಪರ್ಧಿಸಲು ಸೂಚಿಸಿದರೆ ನಾನು ನಿರಾಕರಿಸುವುದಿಲ್ಲ ಎಂದರು.
            
            
            Backward Classes Commission chairman K Jayaprakash Hegde said the merger of Hejamady and Surathkal toll gates has met with mixed response from the citizens.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm