ಬ್ರೇಕಿಂಗ್ ನ್ಯೂಸ್
05-12-22 02:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Sever accident in gurupur near Mangalore truck drivers spot death.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm