ಬ್ರೇಕಿಂಗ್ ನ್ಯೂಸ್
05-12-22 02:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Sever accident in gurupur near Mangalore truck drivers spot death.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm