ಬ್ರೇಕಿಂಗ್ ನ್ಯೂಸ್
            
                        05-12-22 02:44 pm Mangalore Correspondent ಕರಾವಳಿ
            ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
            
            
            Sever accident in gurupur near Mangalore truck drivers spot death.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm