ಬ್ರೇಕಿಂಗ್ ನ್ಯೂಸ್
05-12-22 02:44 pm Mangalore Correspondent ಕರಾವಳಿ
ಮಂಗಳೂರು, ಡಿ.5 : ನಗರ ಹೊರವಲಯದ ಗುರುಪುರದಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕರಿಬ್ಬರು ಸಾವನಪ್ಪಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಕೆಂಪು ಮಣ್ಣು ಹೇರಿಕೊಂಡು ಆಂಧ್ರಕ್ಕೆ ಹೊರಟಿದ್ದ ಕಂಟೇನರ್ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಗುರುಪುರ ಇಳಿಜಾರಿನಲ್ಲಿ ಎದುರಿನಿಂದ ಬರುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ.
ಕೈಕಂಬ ಕಡೆಯಿಂದ ಬರುತ್ತಿದ್ದ ಹತ್ತು ಚಕ್ರದ ಲಾರಿಯು ವಾಮಂಜೂರಿನಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಈಚರ್ ಲಾರಿಗೆ ನೇರವಾಗಿ ಡಿಕ್ಕಿಯಾಗಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಈಚರ್ ಲಾರಿ ಚಾಲಕ ಮತ್ತು ಮಾಲಕರಾಗಿದ್ದ ಕಾವೂರು ಹರಿಪದವು ನಿವಾಸಿ ಲೋಕನಾಥ್ ಶೆಟ್ಟಿಗಾರ್(52) ಸ್ಥಳದಲ್ಲೇ ಸಾವು ಕಂಡಿದ್ದಾರೆ. ಕಂಟೇನರ್ ಲಾರಿಯಲ್ಲಿ ಚಾಲಕನಾಗಿದ್ದ ಆಂಧ್ರಪ್ರದೇಶ ಮೂಲದ ಬಲರಾಮ್ (55) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.



ಗಂಜಿಮಠ ಬಳಿಯಿಂದ ಕೆಂಪು ಮಣ್ಣು ಹೇರಿಕೊಂಡು ಆಂಧ್ರ ಪ್ರದೇಶಕ್ಕೆ ಹೊರಟಿದ್ದ ಕಂಟೇನರ್ ಲಾರಿ ಗುರುಪುರದಿಂದ ಇಳಿಜಾರು ಹೆದ್ದಾರಿಯಲ್ಲಿ ಬರುತ್ತಿದ್ದಾಗ ಓವರ್ ಲೋಡ್ ಕಾರಣದಿಂದ ಬ್ರೇಕ್ ಸಿಗದೆ ನುಗ್ಗಿ ಬಂದಿದೆ. ಬೆಳಗ್ಗೆ ಎಂದಿನಂತೆ ಜಲ್ಲಿ ಕ್ರಶರ್ ನತ್ತ ಸಾಗುತ್ತಿದ್ದ ಈಚರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಈಚರ್ ಲಾರಿ ಅಪ್ಪಚ್ಚಿಯಾಗಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಲೋಕನಾಥ್ ದಾರುಣ ಸಾವು ಕಂಡಿದ್ದಾರೆ.



ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಅರ್ಧ ಗಂಟೆ ಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಎರಡೂ ಲಾರಿಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಬಜ್ಪೆ ಪೊಲೀಸರು ಬಳಿಕ ಕ್ರೇನ್ ತರಿಸಿ ಲಾರಿಯನ್ನು ತೆರವು ಮಾಡಿ ರಸ್ತೆ ಸಂಚಾರ ಸುಗಮಗೊಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Sever accident in gurupur near Mangalore truck drivers spot death.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm