ಮರಳು ಪೂರೈಸಲು ಒತ್ತಾಯಿಸಿ ಪ್ರತಿಭಟನೆ

14-10-20 07:34 pm       Headline Karnataka News Network   ಕರಾವಳಿ

ಮರಳುಗಾರಿಕೆಗೆ ಅಧಿಕೃತ ಪರವಾನಗಿ ನೀಡದ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಸಂಘಟನೆಗಳು ಮಂಗಳೂರಿನ ಮಿನಿ ವಿಧಾನಸೌಧ ದ ಎದುರು ಪ್ರತಿಭಟನೆ ನಡೆಸಿದೆ. 

ಮಂಗಳೂರು, ಅಕ್ಟೋಬರ್ .14 : ಜಿಲ್ಲೆಯಲ್ಲಿ ಮರಳುಗಾರಿಕೆಗೆ ಇನ್ನೂ ಅಧಿಕೃತ ಪರವಾನಗಿ ನೀಡದ ಹಿನ್ನೆಲೆಯಲ್ಲಿ ನಿರ್ಮಾಣ ಕ್ಷೇತ್ರ ಹಾಗೂ ಅವಲಂಬಿತ ಉದ್ದಿಮೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಕಟ್ಟಡ ನಿರ್ಮಾಣ ಸಂಘಟನೆಗಳು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. 

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು ಮರಳು ಪೂರೈಕೆಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಜಿಲ್ಲಾಡಳಿತದಿಂದ ತಮ್ಮ ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆಯದಿದ್ದರೆ ತೀವ್ರ ಹೋರಾಟ ನಡೆಸಲಾಗುವುದೆಂದು ಸಂಘಟನೆಗಳ ಪ್ರಮುಖರು ಎಚ್ಚರಿಕೆ ನೀಡಿದ್ದಾರೆ.

ಈ ವೇಳೆ, ಆಕ್ರೋಶಗೊಂಡು ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಸಿವಿಲ್ ಗುತ್ತಿಗೆದಾರರ ಅಸೋಸಿಯೇಶನ್, ಕ್ರೆಡೈ  , ಎಂಜಿನಿಯರ್ ಅಸೋಸಿಯೇಷನ್, ಬಿಲ್ಡರ್ ಅಸೋಸಿಯೇಷನ್, ಸಿಮೆಂಟ್ ಸ್ಟೀಲ್ ಎಸೋಸಿಯೇಶನ್ , ಹಾರ್ಡ್ವೇರ್ ಅಸೋಸಿಯೇಷನ್ , ಮರಳು ಸಾಗಾಟಗಾರರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿ, ಪದಾಧಿಕಾರಿಗಳು ಭಾಗವಹಿಸಿದ್ದರು.

Civil contractors association stage protest demanding for supply of sand in Mangalore here on 14 October, Wednesday, 2020.