ಬ್ರೇಕಿಂಗ್ ನ್ಯೂಸ್
14-10-20 09:04 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಶಿಕ್ಷಕ ವೃತ್ತಿಯಲ್ಲಿದ್ದ ತನ್ನ ತಂದೆ, ತಾಯಿ ಕೊರೊನಾ ಸೋಂಕಿಗೆ ಒಳಗಾಗಿರುವುದಕ್ಕೆ ಶಿಕ್ಷಣ ಇಲಾಖೆಯ ವಿದ್ಯಾಗಮ ಯೋಜನೆಯೇ ಕಾರಣ ಎಂದು ಆರೋಪಿಸಿ ಪುತ್ರಿ ಜಾಲತಾಣದಲ್ಲಿ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ತುರ್ತಾಗಿ ಸ್ಪಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಸಿಎಂ ಯಡಿಯೂರಪ್ಪ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಮೂಡುಬಿದ್ರೆ ತಾಲೂಕಿನ ಶಿರ್ತಾಡಿ ಗ್ರಾಮದ ನಿವಾಸಿಗಳಾದ ಶಿಕ್ಷಕ ದಂಪತಿ ಶಶಿಕಾಂತ್ ವೈ ಮತ್ತು ಪದ್ಮಾಕ್ಷಿ ಎನ್. ಸೆ.29ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ತಾಯಿ ಪದ್ಮಾಕ್ಷಿ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಪೋರ್ಟ್ ನಲ್ಲಿದ್ದಾರೆ. ಇಬ್ಬರೂ ಶಿಕ್ಷಕ ವೃತ್ತಿಯಲ್ಲಿರುವ ಕಾರಣ ಸರಕಾರ ನಮ್ಮ ಬೆಂಬಲಕ್ಕೆ ಬರಬೇಕು. ಆಸ್ಪತ್ರೆಯ ವೆಚ್ಚ ಭರಿಸಲು ನಮ್ಮಿಂದ ಸಾಧ್ಯವಾಗದು. ಸರಕಾರದಿಂದ ಚಿಕಿತ್ಸೆಯ ಭರಿಸುವಂತೆ ಕೇಳಿಕೊಳ್ಳುತ್ತೇನೆ ಎಂದು ಪುತ್ರಿ ಐಶ್ವರ್ಯ ಜೈನ್ ಫೇಸ್ಬುಕ್ ನಲ್ಲಿ ಶಿಕ್ಷಣ ಸಚಿವರಿಗೆ ಬರೆದ ಪತ್ರ ವೈರಲ್ ಆಗಿದೆ. ಸರಕಾರ ನೆರವು ಬಯಸಿ ಬರೆದ ಪತ್ರಕ್ಕೆ ಈಗ ಸಿಎಂ ಯಡಿಯೂರಪ್ಪ ಸ್ಪಂದಿಸಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕರೆ ಮಾಡಿ, ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಹೆಚ್ಚುವರಿ ಚಿಕಿತ್ಸೆ ನೀಡಲು ಏರ್ಪಾಡು ಮಾಡುವಂತೆ ತಿಳಿಸಿದ್ದಾರೆ. ರೋಗಿಯ ಮನೆಯವರಿಂದ ಯಾವುದೇ ಹಣ ಪಡೆಯದಂತೆ ಸೂಚಿಸಿದ್ದಾರೆ.
ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಪದ್ಮಾಕ್ಷಿಯವರ ಪುತ್ರಿ ಐಶ್ವರ್ಯಾಳನ್ನು ಕರೆ ಮಾಡಿ ಸಂಪರ್ಕಿಸಿದ್ದು , ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತ ನೋಡಿಕೊಳ್ಳಲಿದೆ. ಅ.13ರಂದು ಪದ್ಮಾಕ್ಷಿಯವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದಾಗಿ ಸಾಂತ್ವನ ಹೇಳಿದ್ದಾಗಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm