ಬ್ರೇಕಿಂಗ್ ನ್ಯೂಸ್
14-10-20 09:04 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಶಿಕ್ಷಕ ವೃತ್ತಿಯಲ್ಲಿದ್ದ ತನ್ನ ತಂದೆ, ತಾಯಿ ಕೊರೊನಾ ಸೋಂಕಿಗೆ ಒಳಗಾಗಿರುವುದಕ್ಕೆ ಶಿಕ್ಷಣ ಇಲಾಖೆಯ ವಿದ್ಯಾಗಮ ಯೋಜನೆಯೇ ಕಾರಣ ಎಂದು ಆರೋಪಿಸಿ ಪುತ್ರಿ ಜಾಲತಾಣದಲ್ಲಿ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ತುರ್ತಾಗಿ ಸ್ಪಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಸಿಎಂ ಯಡಿಯೂರಪ್ಪ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಮೂಡುಬಿದ್ರೆ ತಾಲೂಕಿನ ಶಿರ್ತಾಡಿ ಗ್ರಾಮದ ನಿವಾಸಿಗಳಾದ ಶಿಕ್ಷಕ ದಂಪತಿ ಶಶಿಕಾಂತ್ ವೈ ಮತ್ತು ಪದ್ಮಾಕ್ಷಿ ಎನ್. ಸೆ.29ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ತಾಯಿ ಪದ್ಮಾಕ್ಷಿ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಪೋರ್ಟ್ ನಲ್ಲಿದ್ದಾರೆ. ಇಬ್ಬರೂ ಶಿಕ್ಷಕ ವೃತ್ತಿಯಲ್ಲಿರುವ ಕಾರಣ ಸರಕಾರ ನಮ್ಮ ಬೆಂಬಲಕ್ಕೆ ಬರಬೇಕು. ಆಸ್ಪತ್ರೆಯ ವೆಚ್ಚ ಭರಿಸಲು ನಮ್ಮಿಂದ ಸಾಧ್ಯವಾಗದು. ಸರಕಾರದಿಂದ ಚಿಕಿತ್ಸೆಯ ಭರಿಸುವಂತೆ ಕೇಳಿಕೊಳ್ಳುತ್ತೇನೆ ಎಂದು ಪುತ್ರಿ ಐಶ್ವರ್ಯ ಜೈನ್ ಫೇಸ್ಬುಕ್ ನಲ್ಲಿ ಶಿಕ್ಷಣ ಸಚಿವರಿಗೆ ಬರೆದ ಪತ್ರ ವೈರಲ್ ಆಗಿದೆ. ಸರಕಾರ ನೆರವು ಬಯಸಿ ಬರೆದ ಪತ್ರಕ್ಕೆ ಈಗ ಸಿಎಂ ಯಡಿಯೂರಪ್ಪ ಸ್ಪಂದಿಸಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕರೆ ಮಾಡಿ, ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಹೆಚ್ಚುವರಿ ಚಿಕಿತ್ಸೆ ನೀಡಲು ಏರ್ಪಾಡು ಮಾಡುವಂತೆ ತಿಳಿಸಿದ್ದಾರೆ. ರೋಗಿಯ ಮನೆಯವರಿಂದ ಯಾವುದೇ ಹಣ ಪಡೆಯದಂತೆ ಸೂಚಿಸಿದ್ದಾರೆ.


ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಪದ್ಮಾಕ್ಷಿಯವರ ಪುತ್ರಿ ಐಶ್ವರ್ಯಾಳನ್ನು ಕರೆ ಮಾಡಿ ಸಂಪರ್ಕಿಸಿದ್ದು , ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತ ನೋಡಿಕೊಳ್ಳಲಿದೆ. ಅ.13ರಂದು ಪದ್ಮಾಕ್ಷಿಯವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದಾಗಿ ಸಾಂತ್ವನ ಹೇಳಿದ್ದಾಗಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am