ಬ್ರೇಕಿಂಗ್ ನ್ಯೂಸ್
14-10-20 09:04 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಶಿಕ್ಷಕ ವೃತ್ತಿಯಲ್ಲಿದ್ದ ತನ್ನ ತಂದೆ, ತಾಯಿ ಕೊರೊನಾ ಸೋಂಕಿಗೆ ಒಳಗಾಗಿರುವುದಕ್ಕೆ ಶಿಕ್ಷಣ ಇಲಾಖೆಯ ವಿದ್ಯಾಗಮ ಯೋಜನೆಯೇ ಕಾರಣ ಎಂದು ಆರೋಪಿಸಿ ಪುತ್ರಿ ಜಾಲತಾಣದಲ್ಲಿ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ತುರ್ತಾಗಿ ಸ್ಪಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಸಿಎಂ ಯಡಿಯೂರಪ್ಪ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಮೂಡುಬಿದ್ರೆ ತಾಲೂಕಿನ ಶಿರ್ತಾಡಿ ಗ್ರಾಮದ ನಿವಾಸಿಗಳಾದ ಶಿಕ್ಷಕ ದಂಪತಿ ಶಶಿಕಾಂತ್ ವೈ ಮತ್ತು ಪದ್ಮಾಕ್ಷಿ ಎನ್. ಸೆ.29ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ತಾಯಿ ಪದ್ಮಾಕ್ಷಿ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಪೋರ್ಟ್ ನಲ್ಲಿದ್ದಾರೆ. ಇಬ್ಬರೂ ಶಿಕ್ಷಕ ವೃತ್ತಿಯಲ್ಲಿರುವ ಕಾರಣ ಸರಕಾರ ನಮ್ಮ ಬೆಂಬಲಕ್ಕೆ ಬರಬೇಕು. ಆಸ್ಪತ್ರೆಯ ವೆಚ್ಚ ಭರಿಸಲು ನಮ್ಮಿಂದ ಸಾಧ್ಯವಾಗದು. ಸರಕಾರದಿಂದ ಚಿಕಿತ್ಸೆಯ ಭರಿಸುವಂತೆ ಕೇಳಿಕೊಳ್ಳುತ್ತೇನೆ ಎಂದು ಪುತ್ರಿ ಐಶ್ವರ್ಯ ಜೈನ್ ಫೇಸ್ಬುಕ್ ನಲ್ಲಿ ಶಿಕ್ಷಣ ಸಚಿವರಿಗೆ ಬರೆದ ಪತ್ರ ವೈರಲ್ ಆಗಿದೆ. ಸರಕಾರ ನೆರವು ಬಯಸಿ ಬರೆದ ಪತ್ರಕ್ಕೆ ಈಗ ಸಿಎಂ ಯಡಿಯೂರಪ್ಪ ಸ್ಪಂದಿಸಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕರೆ ಮಾಡಿ, ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಹೆಚ್ಚುವರಿ ಚಿಕಿತ್ಸೆ ನೀಡಲು ಏರ್ಪಾಡು ಮಾಡುವಂತೆ ತಿಳಿಸಿದ್ದಾರೆ. ರೋಗಿಯ ಮನೆಯವರಿಂದ ಯಾವುದೇ ಹಣ ಪಡೆಯದಂತೆ ಸೂಚಿಸಿದ್ದಾರೆ.


ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಪದ್ಮಾಕ್ಷಿಯವರ ಪುತ್ರಿ ಐಶ್ವರ್ಯಾಳನ್ನು ಕರೆ ಮಾಡಿ ಸಂಪರ್ಕಿಸಿದ್ದು , ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತ ನೋಡಿಕೊಳ್ಳಲಿದೆ. ಅ.13ರಂದು ಪದ್ಮಾಕ್ಷಿಯವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದಾಗಿ ಸಾಂತ್ವನ ಹೇಳಿದ್ದಾಗಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm